ಬೆಳಗಾವಿ | ಗುಂಡುರಾವ ಕರಿಗಾರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

Advertisements

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಗುಂಡೂರಾವ ಕರಿಗಾರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.

ಡಾ. ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಧ್ಯಾಪಕರು ಡಾ. ಅನಿತಾ ಕೆ. ಗುಡಿ ಅವರ ಮಾರ್ಗದರ್ಶನದಲ್ಲಿ “ಪಂಪಭಾರತ ಮತ್ತು ಕುಮಾರವ್ಯಾಸ ಭಾರತಗಳ ವಸ್ತು ವಿನ್ಯಾಸ: ತೌಲನಿಕ ಅಧ್ಯಯನ” ಎಂಬ ಮಹಾ ಪ್ರಬಂಧವನ್ನು ಮಂಡಿಸಿರುವ ಗುಂಡುರಾವ ಕರಿಗಾರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಯನ್ನು ಘೋಷಣೆ ಮಾಡಿದೆ.

ಶ್ರೀ ಗುಂಡುರಾವ ಕರಿಗಾರ ಸಂಶೋಧನಾ ವಿದ್ಯಾರ್ಥಿ ಡಾ. ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಲ್ಲಿ ಡಾ.ಅನಿತಾ ಕೆ. ಗುಡಿ ಅವರ ಮಾರ್ಗದರ್ಶನದಲ್ಲಿ “ಪಂಪಭಾರತ ಮತ್ತು ಕುಮಾರವ್ಯಾಸ ಭಾರತಗಳ ವಸ್ತು ವಿನ್ಯಾಸ: ತೌಲನಿಕ ಅಧ್ಯಯನ” ಎಂಬ ವಿಷಯದ ಕುರಿತು ಪಿಎಚ್.ಡಿ ಮಹಾ ಪ್ರಬಂಧವನ್ನು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷರು ಮತ್ತು ಕಲಾ ನಿಖಾಯದ ಡೀನರು ಡಾ.ಮೃತ್ಯುಂಜಯ ಅಗಡಿ, ವಿಭಾಗದ ಸಂಯೋಜಕರು ಡಾ.ನಿಂಗಪ್ಪ ಮುದೇನೂರು, ಬಾಹ್ಯ ಮೌಲ್ಯಮಾಪಕರು ಮಂಗಳೂರು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರು ಡಾ. ಸೋಮಣ್ಣ, ಮಾರ್ಗದರ್ಶಕರು ಡಾ.ಅನಿತಾ ಕೆ. ಗುಡಿ, ವಿಭಾಗದ ವಿಶ್ರಾಂತ ಪ್ರಾಧ್ಯಾಪಕರು ಡಾ.ಧನವಂತ ಹಾಜವಗೋಳ, ಪ್ರಾಧ್ಯಾಪಕರು ಡಾ.ಪಿ.ಕೆ.ರಾಠೋಡ, ಡಾ. ಅನಸೂಯ ಕಾಂಬಳೆ, ಡಾ. ಮಲ್ಲಪ್ಪ ಬಂಡಿ, ಡಾ.ವಾಮದೇವಪ್ಪ ತಳವಾರ, ಡಾ.ಬಿ.ಎಸ್.ಭಜಂತ್ರಿ, ವಿಭಾಗದ ಎಲ್ಲ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದ ತಾಯಿ ಮಾಯವ್ವ, ತಂದೆ ಮಾರುತಿ ಕರಿಗಾರ ದಂಪತಿಗಳ ಮಗನಾದ ಗುಂಡುರಾವ ಕರಿಗಾರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಿದ್ದಕ್ಕೆ ತಂದೆ-ತಾಯಿ, ಸಂಬಂಧಿಕರು, ಗುರುಗಳು, ಸ್ನೇಹಿತರು ಹಾಗೂ ಊರಿನ ಗ್ರಾಮಸ್ಥರೆಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

ಸದ್ಯ ಗುಂಡುರಾವ ಕರಿಗಾರ ಅವರು ಕನ್ನಡ ಭಾಷಾ ಶಿಕ್ಷಕರಾಗಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ತಪಸಿ ಗ್ರಾಮ ಗೋಕಾಕ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X