ಬೆಳಗಾವಿ | ವಾಯವ್ಯ ಕರ್ನಾಟಕ ಬದಲು ಕಿತ್ತೂರು ಕರ್ನಾಟಕ ಸಾರಿಗೆ ಎಂದು ನಾಮಕರಣಕ್ಕೆ ಚಿಂತನೆ: ಸತೀಶ್ ಜಾರಕಿಹೊಳಿ

Date:

Advertisements

200ನೇ ರಾಣಿ ಚನ್ನಮ್ಮನ ಕಿತ್ತೂರ ವಿಜಯೋತ್ಸವದ ಹಿನ್ನೆಲೆಯಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬದಲಾಗಿ ಕಿತ್ತೂರ ಕರ್ನಾಟಕ ಸಾರಿಗೆ ಎಂದು ನಾಮಕರಣ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

2024 ರ ಕಿತ್ತೂರ ಚನ್ನಮ್ಮ ಉತ್ಸವದ ಪೂರ್ವಭಾವಿ ಸಿದ್ದತಾ ಸಭೆಯು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಸಚಿವರು, ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವಕ್ಕೆ 200 ವರ್ಷಗಳು ತುಂಬಿರುವ ಹಿನ್ನಲೆ ಕಿತ್ತೂರು ಉತ್ಸವ ವಿಜೃಂಭಣೆಯಿಂದ ಆಚರಿಸಬೇಕಿದೆ. ಇದೇ ವೇಳೆ ವಾಯ ಕರ್ನಾಟಕ ಸಾರಿಗೆ ಬದಲಾಗಿ ಕಿತ್ತೂರ ಕರ್ನಾಟಕ ಸಾರಿಗೆ ಎಂದು ನಾಮಕರಣ ಮಾಡಲು ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

Advertisements

ಕಿತ್ತೂರ ಹಾಗೂ ಸ್ವಾತಂತ್ರ್ಯ ಯೋಧರ ಕುರಿತು ಪ್ರಬಂಧ, ರಸಪ್ರಶ್ನೆ ಸ್ಪರ್ಧೆಗಳನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುವುದರ ಜೊತೆಗೆ ಕಾರ್ಯಕ್ರಮದ ಉದ್ಘಾಟನೆಗೆ ಸೂಕ್ತ ಗಣ್ಯರನ್ನು ಗುರುತಿಸಿ ಜೊತೆಗೆ ಉತ್ಸವದ ಸಂದರ್ಭದಲ್ಲಿ ಕಿತ್ತೂರಿನ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಉತ್ಸವದ ಅಂಗವಾಗಿ ಆಯೋಜಿಸುವ ಕ್ರೀಡಾ ಕೂಟಗಳಲ್ಲಿ ಗ್ರಾಮೀಣ ಭಾಗದ ಕ್ರೀಡೆಗಳಿಗೆ ಹೆಚ್ಚಿನ ಗಮನ ನೀಡಬೇಕು. ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಮತ್ತು ನಗದು ಬಹುಮಾನ ನೀಡಬೇಕು.

ಮೂರು ದಿನಗಳ ಕಾಲ ಜರುಗಲಿರುವ ಚನ್ನಮ್ಮನ ಉತ್ಸವದ ಕಾರ್ಯಕ್ರಮದ ಪ್ರಯುಕ್ತ ಮಾಧ್ಯಮ ಗೋಷ್ಠಿ ಸೇರಿದಂತೆ ಇತರೆ ಗೋಷ್ಠಿಗಳ ಆಯೋಜಿಸಬೇಕು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಸ್ಥಳೀಯ ಕಲಾವಿದರುಗಳಿಗೆ ಪ್ರಾಶಸ್ತ್ಯ ನೀಡಬೇಕು. ಕಲಾವಿದರ ಆಯ್ಕೆಗೆ ಸಮಿತಿ ರಚಿಸಿ ಸಮಿತಿಯಿಂದ ಆಯ್ಕೆಯಾದಂತಹ ಕಲಾವಿದರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ನಿಮಿತ್ತ ಸೆಪ್ಟೆಂಬರ್ 15 ರಂದು ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ಆಯೋಜಿಸಿದ್ದು, ಬೀದರದಿಂದ ಚಾಮರಾಜನಗರದವರೆಗೆ ಒಂದು ಗಂಟೆಯಲ್ಲಿಯೇ ಮಾನವ ಸರಪಳಿ ನಿರ್ಮಿಸಿ, ಸಂವಿಧಾನದ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ, ಬೆಳಗಾವಿ ಉತ್ತರ ವಿಧಾನಸಭಾ ಶಾಸಕ ಆಸೀಫ್ (ರಾಜು) ಸೇಠ, ನಗರ ಪೊಲೀಸ್‌ ಆಯುಕ್ತರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X