ಬೆಳಗಾವಿ | ಚರಂಡಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

Date:

Advertisements

ಬೆಳಗಾವಿ ನಗರದ ಸಾಯಿ ಕಾಲೋನಿಯಲ್ಲಿ ಕಳೆದ ಆರು ತಿಂಗಳಿಂದ ಚರಂಡಿ ಅವ್ಯವಸ್ಥೆ ಕುರಿತ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚರಂಡಿ ಅಧ್ವಾನವಾಗಿರುವ ಪರಿಣಾಮ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.

ಈ ಸಮಸ್ಯೆಯನ್ನು ಅನೇಕ ಬಾರಿ ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸಮಸ್ಯೆಯಿಂದ ಹತ್ತಿರದ ಆಸ್ಪತ್ರೆಗಳಿಗೆ ಹೋಗುವವರು, ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತಿದೆ. ಆರೋಗ್ಯ ಸಮಸ್ಯೆಗಳ ಭೀತಿ ಕೂಡ ವ್ಯಕ್ತವಾಗಿದೆ.

ಈ ಕುರಿತು ಈ ದಿನ ಡಾಟ್ ಕಾಮ್ ಜೊತೆ ಮಾತನಾಡಿದ ಕಾರ್ಪೊರೇಟರ್, “ಈ ಚರಂಡಿಗಳು ಅಮೃತ್ ಯೋಜನೆಯಡಿ ನಿರ್ಮಾಣವಾಗಿದ್ದು, ನಾವು ಸಮಸ್ಯೆಯ ಬಗ್ಗೆ ಮೇಲ್ದರ್ಜೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

Advertisements
WhatsApp Image 2025 04 07 at 9.40.22 AM

“ಸುಮಾರು ಎರಡು ವರ್ಷಗಳಿಂದ ಇಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಚರಂಡಿ ನೀರು ರಸ್ತೆಯ ಮೇಲೆ ಬರುತ್ತಿದ್ದು ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಮಕ್ಕಳಿಗೆ, ವೃದ್ಧರಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಕೇಳುವವರು ಯಾರೂ ಇಲ್ಲದಂತಾಗಿದೆ. ಕಾರ್ಪೋರೇಶನ್‌ ಅಧಿಕಾರಿಗಳು ಇದು ನಮ್ಮ ಜವಾಬ್ದಾರಿಯಲ್ಲ ಎಂದು ಹಾರಿಕೆಯ ಉತ್ತರ ನೀಡುತ್ತಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯ ನಿವಾಸಿ ರುಕ್ಮಿಣಿ ಈದಿನ ಮುಖಾಂತರ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

WhatsApp Image 2025 04 07 at 9.40.36 AM

“ಚರಂಡಿ ನೀರು ರಸ್ತೆ ಮೇಲೆ ಬರುತ್ತಿದ್ದು ಇಲ್ಲಿನ ಜನರ ಆರೋಗ್ಯ ಹಾಳಾಗುತ್ತಿದೆ. ಸಂಜೆಯಾದರೆ ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದೆ. ಜನಪ್ರತಿನಿಧಿಗಳಂತೂ ಓಟು ಪಡೆದ ಮೇಲೆ ಇತ್ತ ಹೆಜ್ಜೆ ಇಡುವುದೇ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು ಅಲ್ಲಿನ ನಿವಾಸಿ ಶಾಂತಾ.

ಶಕುಂತಲಾ ಮಾತನಾಡಿ, “ಕಾಲ ಕಾಲಕ್ಕೆ ಸರಿಯಾಗಿ ಚರಂಡಿಯನ್ನು ಸ್ವಚ್ಛಗೊಳಿಸುತ್ತಿಲ್ಲ. ಇದರಿಂದ ಚರಂಡಿ ನೀರು ರಸ್ತೆಗೆ ಬರುತ್ತದೆ. ಚರಂಡಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಚರಂಡಿ ನೀರನ್ನು ಹೊರಗಡೆ ಹೋಗುವ ಹಾಗೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಸಮಸ್ಯೆ ಬಗೆ ಹರಿಸಿಲ್ಲ” ಎಂದು ತಿಳಿಸಿದರು.

WhatsApp Image 2025 04 07 at 9.40.47 AM

ಸಾಯಿ ಕಾಲೋನಿಯಲ್ಲಿ ಹಲವು ವರ್ಷಗಳಿಂದ ಚರಂಡಿ ಅವ್ಯವಸ್ಥೆಯಿಂದ ಜನರು ಸಮಸ್ಯೆ ಎದುರಿಸುತ್ತಿದ್ದು. ಈ ಅವ್ಯವಸ್ಥೆಗೆ ಇಲ್ಲಿನ ಅಧಿಕಾರಿಗಳು ಮತ್ತು ಸ್ಥಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣ. ಆದಷ್ಟು ಬೇಗನೆ ಚರಂಡಿ ವ್ಯವಸ್ಥೆ ಸರಿಪಡಿಸಿ ಜನರ ಆರೋಗ್ಯ ಕಾಪಾಡುವುದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದೆ.

ಇದನ್ನೂ ಓದಿ: ಬೆಳಗಾವಿ | ಶಾಸಕರ ಸಂಬಂಧಿಯ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X