ಬೆಳಗಾವಿ | ಒಂದು ವರ್ಷದಲ್ಲಿ 90 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ.ನಾಗಲಕ್ಷ್ಮೀ ಚೌಧರಿ

Date:

Advertisements

ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ ವರ್ಷ ಅಂದರೆ 2023 ರಿಂದ ಇಲ್ಲಿಯವರೆಗೆ 2024 ಆಗಸ್ಟ್‌ ತಿಂಗಳವರೆಗೆ ಮಹಿಳೆಯರ ಮೇಲೆ ಒಟ್ಟು 90 ಲೈಂಗಿಕ ದೌರ್ಜನ್ಯ ನಡೆದಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಅವರು, ಬೆಳಗಾವಿ ಜಿಲ್ಲಾಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿ ಕರ್ತವ್ಯ ಪಾಲನೆ, ಮಹಿಳೆಯರಿಗೆ ರಕ್ಷಣೆ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ನಾಗಲಕ್ಷ್ಮೀ ಚೌಧರಿ, ಜಿಲ್ಲೆಯಲ್ಲಿ ನಿರ್ಭಯ ಘಟಕದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ತೊಂಬತ್ತಾಗಿದೆ. ಇನ್ನೂ ಕೆಲವು ಪ್ರಕರಣಗಳು ಬೆಳಕಿಗೆ ಬಾರದೇ ಇರಬಹುದು. ಅವುಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

Advertisements

ಬೆಳಗಾವಿ ಜಿಲ್ಲೆಯಲ್ಲಿ ದೇವದಾಸಿಯರ ಪದ್ಧತಿ ಜೀವಂತ ಇರುವ ವಿಷಯದ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ನಾನು ಸವದತ್ತಿಯಲ್ಲಿ ದೇವದಾಸಿಯರನ್ನು ಭೇಟಿಯಾಗಿ ಅವರ ಜೊತೆಗೆ ಚರ್ಚಿಸಿದ್ದೇನೆ.‌ ಅವರಿಗೆ ಕಾನೂನು ಅರಿವು ಮೂಡಿಸುವ ಅಗತ್ಯ ಇದ್ದು, ಸಂಬಂಧಿಸಿದ ಇಲಾಖೆಯವರಿಗೆ ಸೂಚನೆ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡಲಾಗುವುದು ಹಾಗೂ ಜಿಲ್ಲೆಯ ಬೈಲಹೊಂಗಲ ಹಾಗೂ ಸವದತ್ತಿ ತಾಲೂಕು ಆಸ್ಪತ್ರೆ ಶುಚಿಯಾಗಿವೆ.‌ ಸರ್ಕಾರದ ಆರೋಗ್ಯದ ಸೌಲಭ್ಯವನ್ನು ಸಾರ್ವಜನಿಕರು ಪಡೆದುಕೊಳ್ಳುತ್ತಿದ್ದಾರೆ. ಉಳಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಶಾಲೆಗಳಲ್ಲಿ ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡಬೇಕೆಂದು ಸೂಚನೆ‌ ನೀಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಮ್ಸ್ ನಿರ್ದೇಶಕರಾದ ಅಶೋಕ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X