ಬೆಳಗಾವಿ | ವಿವಾದಿತ ಜಾಗದಲ್ಲಿ ಶವ ಸಂಸ್ಕಾರ ಮಾಡಿದ ಮಹಿಳೆಯರು

Date:

Advertisements

ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು ಮೃತರ ಸಂಸ್ಕಾರ ನೆರವೇರಿಸಿರುವ ಘಟನೆ ಬೆಳಗಾವಿಯ ಕವಳೇವಾಡಿ ಗ್ರಾಮದಲ್ಲಿ ನಡೆದಿದೆ.

ಕವಳೇವಾಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದ ಕಾರಣ, ಗ್ರಾಮದ ಸ್ಥಳೀಯರೊಬ್ಬರ ಜಮೀನಿನಲ್ಲಿ ಹಲವಾರು ವರ್ಷಗಳಿಂದ ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದರು. ಆದರೆ, ಇತ್ತೀಚೆಗೆ, ಜಮೀನಿನ ಮಾಲೀಕ ಓಮನಿ ಗಾವಡೆ ಎಂಬವರು ಕೋರ್ಟ್‌ ಮೆಟ್ಟಿಲೇರಿದ್ದರು. ಹೀಗಾಗಿ, ಜಾಗದ ವಿಚಾರ ವಿವಾದಕ್ಕೆ ಸಿಲುಕಿತ್ತು.

ಶನಿವಾರ ಗ್ರಾಮದ ತುಕಾರಾಮ್ ಮೋರೆ ಎಂಬವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಸಂಸ್ಕಾರ ಮಾಡಲು ಹೋದಾಗ, ಓಮವಿ ಗಾವಡೆ ಅವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಅದೇ ಜಾಗದಲ್ಲಿ ಮೃತದೇಹ ಇಟ್ಟು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಇದೀಗ, ಗ್ರಾಮದ ಮಹಿಳೆಯರು ಅದೇ ಜಾಗದಲ್ಲಿ ಮೃತದೇಹವನ್ನು ಸುಟ್ಟು, ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X