ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಮತದಾನ ಹಕ್ಕು ಪಡೆದ ಜಾರಕಿಹೊಳಿ ಬೆಂಬಲಿಗರು

Date:

Advertisements

ಬೆಳಗಾವಿ ಜಿಲ್ಲಾ ಸಹಕಾರ (ಡಿಸಿಸಿ) ಬ್ಯಾಂಕ್‌ ಚುನಾವಣೆಯನ್ನು ಎದುರಿಸಲು ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರ್ಮಾಣವಾಗಿದೆ. ಮಂಗಳವಾರ ರಾಮದುರ್ಗದಲ್ಲಿ ನಡೆದ ಘಟನೆ ಈ ರಾಜಕೀಯ ಹೋರಾಟಕ್ಕೆ ಮತ್ತಷ್ಟು ತೀವ್ರತೆ ತಂದಿದೆ.

ರಾಮದುರ್ಗದಿಂದ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಾಲಿ ನಿರ್ದೇಶಕ ಎಸ್.ಎಸ್. ಢವಣ ಅವರ ಬೆಂಬಲಿತ ಹನ್ನೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್) ಸದಸ್ಯರು ಭದ್ರತೆಯ ನಡುರಾತ್ರಿ ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ ಮತದಾನ ಹಕ್ಕು ಪಡೆದರು.

ಢವಣ ಅವರಿಗೆ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಬಲಿಷ್ಠ ಬೆಂಬಲ ನೀಡುತ್ತಿದ್ದು, ತಮ್ಮ ಬೆಂಬಲಿತ ಪಿಕೆಪಿಎಸ್ ಸದಸ್ಯರನ್ನು ಗುಪ್ತ ಸ್ಥಳಕ್ಕೆ ಕರೆದೊಯ್ದಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಇತ್ತ ಮಲ್ಲಣ್ಣ ಯಾದವಾಡ ಹಾಗೂ ಹಾಲಿ ಶಾಸಕ ಅಶೋಕ್ ಪಟ್ಟಣ ಅವರೂ ಈ ಚುನಾವಣೆಗೆ ಸಜ್ಜಾಗಿದ್ದಾರೆ. ಇಬ್ಬರ ನಡುವೆ ಹೊಂದಾಣಿಕೆ ಮೂಡುವ ಸಾಧ್ಯತೆಗಳಿದ್ದರೂ ಅಂತಿಮವಾಗಿ ಹೇಗೆ ಬಣ್ಣ ಬದಲಿಸುತ್ತದೆ ಎಂಬ ಕುತೂಹಲ ತಾರಕಕ್ಕೇರಿದೆ.

ಜಾರಕಿಹೊಳಿ–ಪಟ್ಟಣ–ಯಾದವಾಡ ಬಣಗಳ ನಡುವಿನ ಕಾದಾಟದಿಂದ ಡಿಸಿಸಿ ಬ್ಯಾಂಕ್ ಚುನಾವಣೆ ಮತ್ತಷ್ಟು ರೋಚಕ ಹಂತ ತಲುಪಿದೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X