ದ್ವಿಚಕ್ರ ವಾಹನ ಹಾಗೂ ಟ್ರಾಕ್ಟರ್ ನಡುವೆ ಉಪ ರಸ್ತೆ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹೊರವಲಯದ ಗೋಕಾಕ ಕ್ರಾಸ್ ಬಳಿ ನಡೆದಿದೆ.
ಗೋಕಾಕ ತಾಲೂಕಿನ ಬಾಳೋಬಾಳ ಗ್ರಾಮದ ಶಿವಾನಂದ ಲಗಮಣ್ಣ ಕಳಸನ್ನವರ (27) ಮೃತಪಟ್ಟ ವ್ಯಕ್ತಿ ಆಗಿದ್ದು ಬಾಬುರಾವ ದಾನಗೋಳ ಎಂಬ ವ್ಯಕ್ತಿಗೆ ಗಂಭಿರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ವ ಗ್ರಾಮದಿಂದ ಮೂಡಲಗಿ ಪಟ್ಟಣಕ್ಕೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಸ್ಥಳಿಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.