ಬೆಳಗಾವಿ | ಬಜೆಟ್ ಮುಸ್ಲಿಂ ಲೀಗ್ ಬಜೆಟಾ? ಕಾಂಗ್ರೆಸ್ ಬಜೆಟಾ?: ಸಿ.ಟಿ.ರವಿ

Date:

Advertisements

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, “ಮುಹಮ್ಮದ್ ಅಲಿ ಜಿನ್ನಾ ಧಾರ್ಮಿಕತೆ ಆಧಾರದಲ್ಲಿ ದೇಶ ವಿಭಜಿಸಿದಂತೆ, ಸಿದ್ದರಾಮಯ್ಯ ಅವರ ಬಜೆಟ್ ಕೂಡ ಮತಾಧಾರಿತ ನೀತಿಗಳನ್ನು ಅನುಸರಿಸುತ್ತಿದೆ” ಎಂದು ವ್ಯಂಗ್ಯವಾಡಿದರು. “ಈ ಬಜೆಟ್ ಮುಸ್ಲಿಂ ಲೀಗ್ ಬಜೆಟಾ? ಕಾಂಗ್ರೆಸ್ ಬಜೆಟಾ?” ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದರು.

“ಧಾರ್ಮಿಕ ಮೀಸಲಾತಿ ಸಂವಿಧಾನದ ವಿರುದ್ಧ”

“ಸಂವಿಧಾನ ರಚನಾ ಸಮಿತಿಯು ಧಾರ್ಮಿಕ ಆಧಾರದ ಮೀಸಲಾತಿಯನ್ನು ತಿರಸ್ಕರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಶಿಕ್ಷಣ, ಉದ್ಯೋಗ, ಮತ್ತು ಸರ್ಕಾರಿ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ವಿಶೇಷ ಮೀಸಲಾತಿ ಘೋಷಿಸಿದೆ. ಹಿಂದು ಸಮುದಾಯದ ಬಡವರಿಗೆ ಇಂತಹ ಸೌಲಭ್ಯಗಳಿಲ್ಲ” ಎಂದು ಅವರು ಆರೋಪಿಸಿದರು.

Advertisements

“ಕಾನೂನು ಸುವ್ಯವಸ್ಥೆಗೆ ಧಕ್ಕೆ”

ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ ಎಂದು ಸಿ.ಟಿ. ರವಿ ಕಿಡಿಕಾರಿದರು. “ಕ್ರಿಮಿನಲ್ ರಾಜಕಾರಣಕ್ಕೆ ಪ್ರೋತ್ಸಾಹ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ” ಎಂದು ಅವರು ಆಕ್ಷೇಪಿಸಿದರು.

“ರಾಜ್ಯ ಸಾಲದ ಹೊರೆ”

“ಸಿದ್ದರಾಮಯ್ಯ ಸರ್ಕಾರ ₹4 ಲಕ್ಷ ಕೋಟಿ ಸಾಲ ಪಡೆದಿದೆ. ಆದರೆ, ಕಳೆದ ಬಜೆಟ್‌ನಲ್ಲಿ ಘೋಷಿಸಿದ ಅನುದಾನದ ಕೇವಲ 55% ಮಾತ್ರ ಖರ್ಚಾಗಿದೆ. ಉಳಿದ 45% ಹಣ ಈ ಆರ್ಥಿಕ ವರ್ಷ ಮುಗಿಯುವ ಮೊದಲೇ ಖರ್ಚು ಮಾಡಬಹುದೇ?” ಎಂದು ಪ್ರಶ್ನಿಸಿದರು. “ರಾಜ್ಯದ ಆದಾಯ ಕೊರತೆಯಿಂದ ತೆರಿಗೆ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X