ಬೆಳಗಾವಿ | ಆಶ್ರಯ ಯೋಜನೆಗಾಗಿ ರಾಜ್ಯಪಾಲರ ಹೆಸರಿನಲ್ಲಿದ್ದ ಭೂಮಿ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಆಶ್ರಯ ಯೋಜನೆಗಾಗಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಿದ್ದ ಭೂಮಿಯಲ್ಲಿ 5 ಎಕರೆ, 3 ಗುಂಟೆ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳವಡಿಯ ಸರ್ವೆ ಸಂಖ್ಯೆ 221/1ಬಿಯಲ್ಲಿ ಖರಾಬ್ ಹೊರತುಪಡಿಸಿ, 13 ಎಕರೆ, 13 ಗುಂಟೆ ಜಮೀನಿತ್ತು. ಈ ಪೈಕಿ 6 ಎಕರೆ ಜಮೀನನ್ನು ಮಾಲೀಕ ಇಮಾಮ್‌ಹುಸೇನ್‌ ಅತ್ತಾರ್ ಅವರಿಂದ 2002ರಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಲಾಗಿತ್ತು. ಆದರೆ, 2022ರಲ್ಲಿ ಪೋಡಿ ಮತ್ತು ಕ್ಷೇತ್ರ ದುರಸ್ತಿ ವೇಳೆ, ರಾಜ್ಯಪಾಲರ ಹೆಸರಿನಲ್ಲಿ 37 ಗುಂಟೆ ಮಾತ್ರ ದಾಖಲಿಸಿ ಕಂದಾಯ ಮತ್ತು ಭೂಮಾಪನ ಇಲಾಖೆ ಅಧಿಕಾರಿಗಳು ವಂಚಿಸಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ₹10 ಕೋಟಿ ನಷ್ಟ ಉಂಟು ಮಾಡಿದ್ದಾರೆ’ ಎಂದು ದೂರಿದರು.

‘ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ನಿತೇಶ್‌ ಪಾಟೀಲ, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿದ್ದ ಶಶಿಧರ ಬಗಲಿ, ಭೂದಾಖಲೆಗಳ ಉಪನಿರ್ದೇಶಕರಾಗಿದ್ದ ಮೋಹನ ಶಿವನ್ನವರ, ಜಿಲ್ಲಾಧಿಕಾರಿ ಕಾನೂನು ಸಲಹೆಗಾರ ಮುರಗೋಡ ಸೇರಿ ಅನೇಕರು, ಈ ಜಮೀನಿನಲ್ಲಿ ನಿವೇಶನ ನಿರ್ಮಿಸಿ ಖಾಸಗಿಯವರಿಗೆ ದುಬಾರಿ ಬೆಲೆಗೆ ಮಾರಲು ಪೋಡಿ ಮತ್ತು ಕ್ಷೇತ್ರ ದುರಸ್ತಿ ಮಾಡಿದ್ದಾರೆ. ಆದರೆ, ಈ ಪ್ರಕ್ರಿಯೆ ಕೈಗೊಳ್ಳುವ ಮುನ್ನ, ನಿಯಮದಂತೆ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು ಆರೋಪಿಸಿದರು.

Advertisements

‘ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು, ರಾಜ್ಯಪಾಲರ ಹೆಸರಿನಲ್ಲಿದ್ದ ಆಸ್ತಿಯನ್ನೇ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಇಲಾಖೆ ವಿಚಾರಣೆಗೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X