ಬೆಳಗಾವಿ | ಜಿಲ್ಲೆಯ ಜನಪ್ರತಿನಿಧಿಗಳು ಮರಾಠಿ ಮತಕ್ಕಾಗಿ ಎಂಇಎಸ್ ಜೊತೆ ಒಳ ಒಪ್ಪಂದ

Date:

Advertisements

ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮರಾಠಿಗರಷ್ಟೇ ಮತ ಹಾಕಿಲ್ಲ ಕನ್ನಡಿಗರೂ ಮತ ಹಾಕಿದ್ದಾರೆ. ಹಾಗಾಗಿ ಮತಗಳ ಮೇಲಿನ ಆಸೆಗಾಗಿ ಮರಾಠಿಗರು ಮತ್ತು ಎಂಇಎಸ್‌ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನೀವು ನಿಲ್ಲಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷರು ಮಹಾರಾಷ್ಟ್ರದಲ್ಲಿ ಶಿವಸೇನಾ ಪಕ್ಷವಿದೆ. ಅದರ ಕಾರ್ಯಕರ್ತರು ಪ್ರತಿದಿನ ಗೂಂಡಾಗಿರಿ ಮಾಡಿಯೇ ಬದುಕುತ್ತಿದ್ದಾರೆ. ಹಾಗಾಗಿ ಪಕ್ಷದ ಹೆಸರನ್ನೇ ‘ಮಹಾರಾಷ್ಟ್ರ ಗೂಂಡಾ ಸೇನೆ’ ಎಂದು ಬದಲಿಸಬೇಕು. ಗೂಂಡಾ ಪ್ರವೃತ್ತಿಯುಳ್ಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು. ಇಲ್ಲದಿದ್ದರೆ ಅವರ ಉಪಟಳ ಹೆಚ್ಚುತ್ತದೆ’ ಎಂದು ಹೇಳಿದರು.

ಬೆಳಗಾವಿಯಲ್ಲಿ ವಾಸಿಸುವ ಪ್ರತಿಯೊಬ್ಬರೂ ನಾಡಿನ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವುದನ್ನು ಬಿಟ್ಟು, ನ್ಯಾಯಯುತವಾಗಿ ಬದುಕಬೇಕು. ರಾಜ್ಯದಲ್ಲಿ ಆಡಳಿತ ಭಾಷೆಯಾದ ಕನ್ನಡ ಕಲಿಯಲೇಬೇಕು’ ಎಂದು ಗುಡುಗಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X