ಬೆಳಗಾವಿ | ಜಾತಿ ಗಣತಿಗೆ ಡಿಕೆಶಿ ವಿರೋಧ ಆರೋಪ; ಖಂಡನೆ

Date:

ಒಕ್ಕಲಿಗರ ಸಂಘದ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಜಾರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿರುವುದು ಖಂಡನೀಯ ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ವಿನಾಯಕ ಕಟ್ಟಿಕರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಅವರು ಮಾತನಾಡಿದರು. “ಗುರುವಾರ ಒಕ್ಕಲಿಗರ ಸಂಘ ಹಾಗೂ ಸರ್ಕಾರದ ಕೆಲವು ಸಚಿವರು ಶಾಸಕರು ಹಾಗೂ ಸಮಾಜದ ಪ್ರಮುಖ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಯಾವುದೇ ಕಾರಣಕ್ಕೆ ಜಾತಿ ಗಣತಿ ಜಾರಿಯಾಗದಂತೆ ಸರ್ಕಾರದ ಮೇಲೆ ಡಿ.ಕೆ ಶಿವಕುಮಾರ್ ಒತ್ತಡ ಹೇರಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಾಜದ ಮುಖಂಡರ ನಿಯೋಗದ ಮೂಲಕ ತೆರಳಿ ವರದಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲು ಮುಂದಾಗುವ ಮೂಲಕ ಅಹಿಂದ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಾಂಗ್ರೆಸ್ ರಾಷ್ಟ್ರೀಯ ನಾಯಕರು ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಿ, ಅಹಿಂದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಹೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್‌ ರಾಜ್ಯಾಧ್ಯಕ್ಷರೇ ಅವರ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್‌ ದ್ವೀಮುಖ ನೀತಿಯನ್ನು ಎತ್ತಿ ತೋರಿಸುತ್ತಿದೆ. ಈ ಹಿಂದೆ ಅಹಿಂದ ವರ್ಗದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ತಾವೇ ಮಾಡಿಸಿರುವ ಜಾತಿ ಗಣತಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಉಪ ಮುಖ್ಯಮಂತ್ರಿಗಳು ಕರ್ನಾಟಕದ ಜನತೆಗೆ ಸಮಾನ ಹಕ್ಕನ್ನು ನೀಡುವಲ್ಲಿ ವಿಫಲವಾಗುತ್ತಿದ್ದಾರೆ ಎಂಬುದಕ್ಕೆ ಗುರುವಾರ ನಡೆದ ಸಭೆಯೇ ಸಾಕ್ಷಿಯಾಗಿದೆ. ಒಂದು ವೇಳೆ ರಾಜ್ಯದ ಅಹಿಂದ ವರ್ಗದ ಹಾಗೂ ಎಲ್ಲ ಜನರ ಹಿತಕ್ಕಿಂತ ಕೇವಲ ತಮ್ಮ ಸಮುದಾಯದ ಹಿತ ಬಯಸುವದಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ದಲಿತ ಮುಖಂಡ ವಸಂತ ರಾಣ್ಣಪ್ಪಗೋಳ, ಆನಂದ ತಾಯವ್ವಗೋಳ ಹಾಗೂ ಹಿಂದೂಳಿದ ವರ್ಗದ ಮುಖಂಡರಾದ ಶಿವಪ್ಪ ನಾಯಿಕ, ಗಣೇಶ ದಳವಾಯಿ, ಮನಸೂರ ಮಕಾನದಾರ, ಬಾಬಾಜಾನ ಜಕಾತಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...