ಬೆಳಗಾವಿ : ಯೂರಿಯಾ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ರೈತರ ಆಕ್ರೋಶ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊಬ್ಬರದ ಕೊರತೆಯಿಂದ ಹತಾಶರಾಗಿರುವ ರೈತರು ಮಂಗಳವಾರ ಸವದತ್ತಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಕಚೇರಿ ಎದುರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದರು.

ರೈತರು ಆರೋಪಿಸಿದಂತೆ, ಗೊಬ್ಬರವನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು, ಕೃಷಿ ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವಾಗಿದೆ. ರೈತರಿಗೆ ಲಿಂಕ್ ಗೊಬ್ಬರ ಒತ್ತಾಯಪೂರ್ವಕವಾಗಿ ನೀಡಲಾಗುತ್ತಿದೆ. ಆದರೆ, ಲಿಂಕ್ ಕಡ್ಡಾಯವಿಲ್ಲದ ಖಾಸಗಿ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತೀಯ ಕಿಸಾನ ಸಂಘದ ಪ್ರಾಂತ ಸದಸ್ಯ ಶಿವಾನಂದ ಸರದಾರ ಮಾತನಾಡಿ, “ಕೃಷಿ ಅಧಿಕಾರಿ ಎಸ್.ವಿ. ಪಾಟೀಲ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಹಾಗೂ ಗೊಬ್ಬರ ಕಂಪನಿಗಳ ಹೊಂದಾಣಿಕೆಯಿಂದ ರೈತರು ಶೋಷಿತರಾಗುತ್ತಿದ್ದಾರೆ” ಎಂದು ಹೇಳಿದರು.

Advertisements

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಸಂಪಗಾಂವಿ ಅವರು, “ತಾಲ್ಲೂಕಿನಲ್ಲಿ ಸಾವಿರಾರು ಹೆಕ್ಟೇರಲ್ಲಿ ಗೋವಿನಜೋಳ ಬಿತ್ತನೆ ಆಗಿದ್ದು, ಅಗತ್ಯ ಗೊಬ್ಬರ ಲಭ್ಯವಿಲ್ಲ. ಟಿಎಪಿಸಿಎಂಎಸ್, ಪಿಕೆಪಿಎಸ್ ಮತ್ತು ಖಾಸಗಿ ಕೇಂದ್ರಗಳಲ್ಲಿ ಗೊಬ್ಬರ ಪೂರೈಕೆಯಿಲ್ಲ” ಎಂದು ಆರೋಪಿಸಿದರು.

ಯೂರಿಯಾ, ಡಿಎಪಿ, ಪೊಟ್ಯಾಶ್ ಹಾಗೂ ಕೀಟನಾಶಕಗಳ ಅಭಾವ, ನ್ಯಾನೋ ಗೊಬ್ಬರದ ಬಲವಂತದ ವಿತರಣೆಗೆ ತೀವ್ರ ವಿರೋಧ ವ್ಯಕ್ತವಾಯಿತು. ಗೊಬ್ಬರ ಲಭ್ಯವಿಲ್ಲದ ಕಾರಣದಿಂದ ಬೆಳೆ ನಾಶವಾಗುತ್ತಿದೆ ಎಂದು ರೈತರು ತಿಳಿಸಿದರು.

ಪ್ರತಿಭಟನೆಯಲ್ಲಿ ಶ್ರೀಕಾಂತ ಹಟ್ಟಿಹೊಳಿ, ಬಸವರಾಜ ಬಿಜೂರ, ಸುರೇಶ ಅಂಗಡಿ, ಮಲ್ಲಪ್ಪ ಹುಂಡನವರ, ಕಲ್ಲನಗೌಡ ಪಾಟೀಲ, ಅಪ್ಪಾಸಾಬ ಹಲೀಮನವರ, ಶೋಭಾ ಪಾಟೀಲ, ಮಾಲಾ ಗುರವನ್ನವರ, ಅಖಿಲಾ ತಿವಾರಿ ಸೇರಿದಂತೆ ಹಲವು ರೈತ ಮುಖಂಡರು ಭಾಗವಹಿಸಿದ್ದರು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X