ಬೆಳಗಾವಿ | ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ರೈತರ ಆರೋಪ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿದರು.

ಈ ಸಂದರ್ಭದಲ್ಲಿ ರೈತ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುರೇಶ ಸಂಪಗಾವಿ ಮಾತನಾಡಿ, ‘ತಲಾ ₹ 4,500 ಬೆಲೆಯ 250 ಗೊಬ್ಬರದ ಚೀಲಗಳನ್ನು ಅವಶ್ಯವಿರುವ ರೈತರಿಗೆ ನಿಡದೇ ಅಧಿಕಾರಿಗಳೇ ಕಳವು ಮಾಡಿದ್ದಾರೆ ಶುಕ್ರವಾರ ಸಂಜೆಯವರೆಗೂ ರೈತರು ಕಚೇರಿಯಲ್ಲಿದ್ದರು. ಕಚೇರಿ ಸಮಯ ಮುಗಿಯುವವರೆಗೂ ನಿಂತರೂ ಗೊಬ್ಬರ ವಿತರಿಸಿಲ್ಲ. ಶನಿವಾರ ಮತ್ತು ಭಾನುವಾರ ರಜೆ ಇದ್ದಾಗ ಕಳವು ಮಾಡಿದ್ದಾರೆ ಗೊಬ್ಬರ ಪಡೆದ ರೈತರ ವಿವರ ನೀಡಿರಿ ಎಂದರೆ ನೀಡುತ್ತಿಲ್ಲ. ಉತ್ತರಿಸಬೇಕಾದವರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಕೆಲವರು ಸಭೆಯ ನೆಪ ಹೇಳಿ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಮಾರ್ಚ್‌ನಲ್ಲಿ ನೀಡಬೇಕಾದುದನ್ನು ಮಳೆಗಾಲ ಆರಂಭವಾದರೂ ಕೊಡುತ್ತಿಲ್ಲ. ಅದನ್ನೇ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲು ರೈತರು ಮುಂದಾದರು. ಪೊಲೀಸಲು ರೈತರ ಮನವೊಲಿಸಿ ಪ್ರತಿಭಟನೆ ನಿಲ್ಲಿಸಲು ಯಶಸ್ವಿಯಾದರು. ನಂತರ ಶಿರಸ್ತೇದಾರ ಶಶಿರಾಜ ವನಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

Advertisements

ಬಸವರಾಜ ಮೊಖಾಶಿ, ಮಹಾಂತೇಶ ಕಮತ, ಬೀರಪ್ಪ ದೇಶನೂರ, ಮಹಾಂತೇಶ ಮುತವಾಡ, ಸಮರ್ಥ ಪಾಟೀಲ, ರಾಮನಗೌಡ ಪಾಟೀಲ, ಶಿವಪ್ಪ ಹೊರಟ್ಟಿ, ಹನಮಂತ ದನದಮನಿ, ಮೂಗಬಸಪ್ಪ ಕರೀಕಟ್ಟಿ, ಮಲ್ಲಿಕಾರ್ಜುನ ಹಂಚಿನಾಳ, ಸಿದ್ದಪ್ಪ ಕರಡಿ, ರಾಮಲಿಂಗಪ್ಪ ದನದಮನಿ, ಗುರುನಾಥ ಕರೀಕಟ್ಟಿ, ಜೆ.ವಿ. ಅಗಡಿ, ಸಿದ್ದಪ್ಪ ಪಟ್ಟದಕಲ್ಲ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ : ನಾಳೆ ಶಾಲಾ ಕಾಲೇಜು ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ...

Download Eedina App Android / iOS

X