ಬೆಳಗಾವಿ | ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ನಾಲ್ಕು ಜನ ಆರೋಪಿಗಳ ಬಂಧನ

Date:

Advertisements

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 24 ಗಂಟೆಯೊಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣಕಾರರನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಿಯಲ್ ಎಸ್ಟೆಟ್ ಉದ್ಯಮಿಯ ಅಪಹರಣ ಕುರಿತು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ.

ಮೂಡಲಗಿ ತಾಲ್ಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ್​ ಅಂಬಿ ಅವರನ್ನು ಅಪಹರಣ ಮಾಡಲಾಗಿತ್ತು. ಅವರ ಪತ್ತೆಗಾಗಿ ಘಟಪ್ರಭಾ ಪೊಲೀಸರು ಹಾಗೂ ನಿಪ್ಪಾಣಿ ಪೊಲೀಸರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು. ನಮ್ಮ ಪೊಲೀಸರ ತಂಡ ವ್ಯಕ್ತಿಯನ್ನು ರಕ್ಷಣೆ ‌ಮಾಡಿ ಆರೋಪಿಗಳಾದ ಆರೋಪಿಗಳಾದ ಈಶ್ವರ ರಾಮಗಾನಟ್ಟಿ, ಸಚಿನ್ ಕಾಂಬಳೆ, ರಮೇಶ್ ಕಾಂಬಳೆ, ರಾಘವೇಂದ್ರ ಮಾರಾಪುರನನ್ನು ಬಂಧಿಸಿದ್ದೇವೆ.

Advertisements

ಪ್ರಕರಣದಲ್ಲಿ ಇನ್ನೂ ಕೆಲವು ಜನ ಭಾಗಿಯಾಗಿದ್ದಾರೆ ಎನ್ನುವ ಸಂದೇಹವಿದ್ದು ಅವರನ್ನೂ ಸಹ ವಶಕ್ಕೆ ಪಡೆದು ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಅಪಹರಣಕ್ಕೊಳಗಾದ ಬಸವರಾಜ್​ ಅಂಬಿ ಬೇರೆ ಅಕ್ರಮ ಕೆಲಸದಲ್ಲಿ ಭಾಗಿಯಾಗಿದ್ದ. ಆತ ಅಕ್ರಮದಲ್ಲಿ ಭಾಗಿಯಾಗಿದ್ದು ಆರೋಪಿಗಳಿಗೆ ಗೊತ್ತಿತ್ತು. ಅವನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟರೆ ಆತ ಯಾರಿಗೂ ಹೇಳಲ್ಲ ಎಂಬ ನಂಬಿಕೆ ಆರೋಪಿಗಳಲ್ಲಿತ್ತು. ಹಾಗಾಗಿ, ಅಪಹರಣಕ್ಕೊಳಗಾದ ಬಸವರಾಜನ ಮಗನ ಬಳಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಬಸವರಾಜನ ಪತ್ನಿ ಪೊಲೀಸ್​ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದರು. ದೂರು ಸ್ವೀಕರಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಡಾ. ಭೀಮಾಶಂಕರ ಗುಳೇದ್​ ಪ್ರಕರಣ ಕುರಿತು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X