ಬೆಳಗಾವಿ | ಬಿಜೆಪಿ ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ಅಕ್ರಮ; ತನಿಖೆಗೆ ಸತೀಶ್ ಜಾರಕಿಹೊಳಿ ಅದೇಶ

Date:

Advertisements

ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇತ್ತೀಚೆಗೆ, ಬೆಳಗಾವಿ ಮಹಾನಗರ ಪಾಲಿಕೆ ವಿಚಾರಕ್ಕೆ ಆರಂಭವಾದ ರಾಜಕೀಯ ಕದನ, ಇದೀಗ ಅಕ್ರಮ, ತನಿಖೆಗಳ ಮಟ್ಟಕ್ಕೆ ಹೋಗಿ ನಿಂತಿದೆ. ಅಭಯ್ ಪಾಟೀಲ್ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ತಿನಿಸು ಕಟ್ಟೆ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ತನಿಖೆಗೆ ಸತೀಶ್‌ ಜಾರಕಿಹೊಳಿ ಆದೇಶಿಸಿದ್ದಾರೆ.

ಅಭಯ್ ಪಾಟೀಲ್ ಅವರು ತಮ್ಮ ಬೆಳಗಾವಿ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 13 ಗಂಟೆ ಜಾಗದಲ್ಲಿ 2019-20ರಲ್ಲಿ ತಿನಿಸು ಕಟ್ಟೆ ನಿರ್ಮಾಣ ಮಾಡಿದ್ದರು. ಅಲ್ಲಿನ ಮಳಿಗೆಗಳನ್ನು ಅಭಯ್ ಪಾಟೀಲ್ ಅವರು ತಮ್ಮ ಬೆಂಬಲಿಗರಿಗೆ ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಮತ್ತು ನಾಲೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಆ ಕಟ್ಟೆ ನಿರ್ಮಾಣದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಪಾಲಿಕೆಯ ಮಾಜಿ ಸದಸ್ಯ ದೀಪಕ ಜಮಖಂಡಿ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು.

ಮಳಿಗೆಗಳು ಒಬ್ಬರ ಹೆಸರಿನಲ್ಲಿ ಹರಾಜಾಗಿವೆ. ಆದರೆ, ಅವರು ಮತ್ತೊಬ್ಬರಿಗೆ ಬಾಡಿಗೆಗೆ ನೀಡಿದ್ದಾರೆ. ಅಲ್ಲದೆ, ಅವರು ಸರ್ಕಾರ ನಿಗದಿ ಮಾಡಿರುವ ಬಾಡಿಗೆ ಮೊತ್ತಕ್ಕಿಂತ ಹೆಚ್ಚು ಬಾಡಿಗೆ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ಇದೀಗ ಅಕ್ರಮಗಳ ಬಗ್ಗೆ ಲೋಕೋಪಯೋಗಿ ಇಲಾಖೆಯಿಂದ ತನಿಖೆ ನಡೆಸಲು ಸತೀಶ್ ಜಾರಕಿಹೊಳಿ ಆದೇಶಿಸಿದ್ದಾರೆ. ಇಲಾಖೆಯ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದಲ್ಲಿ ಆರು ಮಂದಿ ಅಧಿಕಾರಿಗಳ ತಂಡ ಬೆಳಗಾವಿಗೆ ತೆರಳಿದ್ದು, ತನಿಖೆ ಆರಂಭಿಸಿದೆ. ಅಧಿಕಾರಿಗಳು ಎಲ್ಲ ಮಳಿಗೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X