ಬೆಳಗಾವಿ | ʼಮಾರುಕಟ್ಟೆ ದರ ಆಧರಿಸಿ ಲೋಕಸಭಾ ಚುನಾವಣಾ ಪ್ರಚಾರ ವೆಚ್ಚ ನಿಗದಿʼ

Date:

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣೆ ಪ್ರಚಾರ ವೆಚ್ಚದ ದರ ನಿಗದಿಪಡಿಸುವ ಕುರಿತು ಗುರುವಾರ (ಡಿ.21) ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟಿಲ್ ಸಭೆ ನಡೆಸಿದ್ದಾರೆ.

ಬರಲಿರುವ ಲೋಕಸಭೆ ಚುನಾವಣೆ ಸಂದರ್ಭ ಚುನಾವಣೆ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಬಳಸುವ ಸಾಮಗ್ರಿಗಳು ಮತ್ತು ಸೇವೆಗಳ ವೆಚ್ಚದ ದರವನ್ನು ಮಾರುಕಟ್ಟೆಯ ನಿರ್ದಿಷ್ಟ ದರ ಆಧರಿಸಿಯೇ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ  ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಆರು ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ವಿವಿಧ ಸಾಮಗ್ರಿ ಮತ್ತು ಸೇವೆಗಳ ದರ ನಿಗದಿಪಡಿಸಲಾಗಿತ್ತು. ಆದರೆ‌, ಪ್ರಸ್ತುತ ಮಾರುಕಟ್ಟೆ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಯನ್ನು ಆಧರಿಸಿ, ದರಗಳಲ್ಲಿ ಅಗತ್ಯ ಪರಿಷ್ಕರಣೆ ಮಾಡಲಾಗುವುದು ಎಂದರು. ಈ ವೇಳೆ ಚುನಾವಣಾ ಪ್ರಚಾರ ಸಂದರ್ಭ ಬಳಸಲಾಗುವ ಹೂವುಗಳ ದರ ಕಡಿಮೆಗೊಳಿಸಬೇಕು ಎಂದು ಪ್ರತಿನಿಧಿಗಳು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2024 ಜನವರಿ 1ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಅಲ್ಲಿಯವರೆಗೂ ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ನಿರ್ದೇಶನದ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದ್ದು ನಗರದಲ್ಲಿನ ಪುಷ್ಪ ಹರಾಜು ಕೇಂದ್ರದಿಂದ ಸಗಟು ಮಾರುಕಟ್ಟೆಯ ದರ ಪಡೆದುಕೊಂಡು ಪರಿಷ್ಕರಿಸಲಾಗುವುದು. ಹೊಸ ಸಾಮಗ್ರಿ‌ ಅಥವಾ ಸೇವೆಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದ ಜಿಲ್ಲಾಧಿಕಾರಿ ಅ.27ರಿಂದ ಡಿ.9ರ ಅವಧಿಯಲ್ಲಿ ಮಾಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿಯಾದ ವಿಜಯಕುಮಾರ ಹೊನಕೇರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶ್ರೀಶೈಲ ಕಂಕಣವಾಡಿ, ಮಹಾನಗರ ಪಾಲಿಕೆ ಉಪ ಆಯುಕ್ತೆ ರೇಷ್ಮಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಾಳಿಕೋಟೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...