ಬೆಳಗಾವಿ : ಬೆಳಗಾವಿಯಲ್ಲಿ ಪ್ರೇಮಿಗಳ ದಾರುಣ ಅಂತ್ಯ: ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ

Date:

Advertisements

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಪ್ರೇಮಿಯೊಬ್ಬರು ಯುವತಿಯೋರ್ವಳ ಜತೆ ಆಟೊ ರಿಕ್ಷಾದೊಳಗೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಮೃತರನ್ನು ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದ ರಾಘವೇಂದ್ರ ನಾರಾಯಣ ಜಾಧವ (28) ಹಾಗೂ ರಂಜಿತಾ ಅಡಿವೆಪ್ಪ ಚೌಬಾರಿ (25) ಎಂದು ಗುರುತಿಸಲಾಗಿದೆ. ಘಟನಾ ಸ್ಥಳ ಹಿರೇನಂದಿ ಗ್ರಾಮವು ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಗ್ರಾಮಕ್ಕೆ ಹೊಂದಿಕೊಂಡಿದ್ದು, ಸ್ಥಳೀಯರಿಗೆ ಮಂಗಳವಾರ ಬೆಳಗ್ಗೆ ಆಟೊ ನಿಂತಿದ್ದುದನ್ನು ಕಂಡು ಅನುಮಾನ ವ್ಯಕ್ತವಾಗಿ ಪ್ರಕರಣ ಬೆಳಕಿಗೆ ಬಂದಿದೆ.


ಮೂಲಗಳ ಪ್ರಕಾರ, ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ರಂಜಿತಾಳ ವಿವಾಹವನ್ನು ಇತರ ಯುವಕನೊಂದಿಗೆ ನಿಶ್ಚಿತಗೊಳಿಸಲಾಗಿದ್ದು, ಈ ಹಿನ್ನೆಲೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.

Advertisements


ಆಟೊದ ಮೇಲ್ಭಾಗದ ಕಬ್ಬಿಣದ ಸಲಾಖೆಗೆ ಹಗ್ಗ ಕಟ್ಟಲಾಗಿದ್ದು, ಇಬ್ಬರೂ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದರು. ಅವರ ದೇಹಗಳು ಆಟೊದೊಳಗೇ ಕಾಲು ನೆಲಕ್ಕೆ ಮುಟ್ಟಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಈ ಘಟನೆ ಎಂತಹ ಆಘಾತಕಾರಿಯಾಗಿ ನಡೆದಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.


“ನಮ್ಮ ಸಹೋದರ ಪ್ರೀತಿಯ ವಿಷಯ ಕುರಿತು ಮನೆಯವರ ಜೊತೆ ಯಾವುದೇ ಚರ್ಚೆ ಮಾಡಿರಲಿಲ್ಲ. ಸೋಮವಾರ ಮಧ್ಯಾಹ್ನ ಆಟೊ ತೆಗೆದುಕೊಂಡು ಹೋಗಿದ್ದ ಅವನು ಮರಳಿ ಬಂದಿರಲಿಲ್ಲ. ಮಂಗಳವಾರ ಬೆಳಗ್ಗೆ ಪೊಲೀಸರು ಕರೆ ಮಾಡಿದಾಗ ಮಾತ್ರ ಘಟನೆ ಕುರಿತು ತಿಳಿದುಬಂದಿತು,” ಎಂದು ರಾಘವೇಂದ್ರನ ಸಹೋದರ ಸೋಮನಾಥ ಜಾಧವ ಮಾಧ್ಯಮದೊಂದಿಗೆ ಮಾತನಾಡಿದರು.


ಸ್ಥಳಕ್ಕೆ ದೌಡಾಯಿಸಿದ ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ಕಿರಣ ಮೊಹಿತೆ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

ಬೆಳಗಾವಿ : ಮಾನವೀಯತೆ ಮರೆತು ರೋಗಿಯನ್ನು ಚಳಿಯಲ್ಲಿ ಬಿಟ್ಟು ಹೋದ ಸಿಬ್ಬಂದಿ

ಮಾನವೀಯತೆ, ಕರುಣೆ ಎನ್ನುವುದು ಆಸ್ಪತ್ರೆಯ ಆವರಣದಲ್ಲಿ ಮರೆತುಹೋದಂತಾಗಿದೆ. ಬೆಳಗಾವಿ ಬಿಮ್ಸ್ ಮಲ್ಟಿ...

Download Eedina App Android / iOS

X