ಬೆಳಗಾವಿ | ಎಂಬಿಎ ಪದವೀಧರೆಯ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ

Date:

Advertisements

ಬೆಳಗಾವಿ ನಗರದ ನೆಹರು ನಗರದಲ್ಲಿರುವ ಪಿಜಿಯಲ್ಲಿ ಎಂಬಿಎ ಪದವೀಧರೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯ (24) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ.

ಐಶ್ವರ್ಯ ವಿಜಯಪುರದಲ್ಲಿಯೇ ಎಂಬಿಎ ಪದವಿ ಪೂರೈಸಿ, ಉದ್ಯೋಗಕ್ಕಾಗಿ ಬೆಳಗಾವಿಗೆ ಬಂದಿದ್ದು, ಸ್ಥಳೀಯ ಖಾಸಗಿ ಕಂಪನಿಯೊಂದರಲ್ಲಿ ಕಲಿಕಾ ತರಬೇತಿಯಲ್ಲಿದ್ದಳು. ಕಳೆದ ಮೂರು ತಿಂಗಳಿನಿಂದ ಪಿಜಿಯಲ್ಲಿ ವಾಸಿಸುತ್ತಿದ್ದ ಯುವತಿ, ಮಂಗಳವಾರ ಸಂಜೆ 6:30ರಿಂದ 7:30ರ ನಡುವೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

CCTV ದೃಶ್ಯಾವಳಿಗಳು

Advertisements

ಐಶ್ವರ್ಯ ಆತ್ಮಹತ್ಯೆಗೆ ಮೊದಲು ತನ್ನ ಗೆಳತಿಯೊಂದಿಗೆ ಮಾತನಾಡಿ ರೂಂಗೆ ತೆರಳಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ, ಆಕೆಯ ಸ್ನೇಹಿತನೂ ಪಿಜಿಗೆ ಬಂದು ಹೋಗಿರುವ ದೃಶ್ಯವೂ ದಾಖಲಾಗಿದ್ದು, ಲವ್ ಬ್ರೇಕಪ್ ಕಾರಣವಾಗಿರಬಹುದೆಂಬ ಅನುಮಾನ ಮೂಡಿಸಿದೆ.

ಯುವತಿಯ ಫೋನ್ ರಿಸೀವ್ ಮಾಡದ ಹಿನ್ನೆಲೆ, ಆಕೆಯ ಸ್ನೇಹಿತ ಗಾಬರಿಯಿಂದ ಪಿಜಿಗೆ ಆಗಮಿಸಿದ್ದಾನೆ. ಬಾಗಿಲು ಒಡೆದು ನೋಡಿದಾಗ, ಐಶ್ವರ್ಯ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಮೊಬೈಲ್ ಕಾಲ್ ಡೀಟೈಲ್ಸ್ ಪರಿಶೀಲನೆ ಆರಂಭಿಸಿದ್ದಾರೆ.

ಪಿಜಿಗೆ ಬಂದುಹೋದ ಸ್ನೇಹಿತನ ಬಗ್ಗೆ ಪೊಲೀಸರ ಶೋಧ ಮುಂದುವರಿದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಬೇಕಾಗಿದೆ. ಈ ಪ್ರಕರಣ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X