ಬೆಳಗಾವಿ : ಗಣೇಶೋತ್ಸವ ಮೆರವಣಿಗೆ ಮಾರ್ಗ ಬದಲಾವಣೆಗೆ ಶಾಸಕ ಅಭಯ ಪಾಟೀಲ್ ವಿರೋಧ

Date:

Advertisements

ನಗರದಲ್ಲಿ ನಡೆಯಲಿರುವ ಗಣೇಶೋತ್ಸವ ವಿಸರ್ಜನೆ ಮೆರವಣಿಗೆಯ ವೇಳೆ ಪೊಲೀಸ್ ಇಲಾಖೆ ಹೊರಡಿಸಿರುವ ಹೊಸ ಷರತ್ತುಗಳಿಗೆ ಶಾಸಕ ಅಭಯ ಪಾಟೀಲ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಅನಗತ್ಯ ನಿಯಮಾವಳಿ ಹೇರಲಾಗುತ್ತಿದ್ದು, ಗಣೇಶೋತ್ಸವ ಮಂಡಳಿಗಳಿಗೆ ತೊಂದರೆ ಉಂಟುಮಾಡುವ ರೀತಿಯ ನಿಯಮಗಳನ್ನು ಅನುಸರಿಸಬಾರದು ಎಂದು ಹೇಳಿದರು.

ಸಭೆಯಲ್ಲಿ ಪೊಲೀಸರು ಒಟ್ಟು 40 ಗಣೇಶ ಮಂಡಳಿಗಳ ಮೆರವಣಿಗೆಯ ಮಾರ್ಗ ಬದಲಾವಣೆ, ಪಟಾಕಿ ಹಾರಿಸಲು ನಿಷೇಧ, ವಾದ್ಯಮೇಳಗಳಿಗೆ ನಿರ್ದಿಷ್ಟ ಪ್ರದೇಶದವರೆಗೆ ಮಾತ್ರ ಅವಕಾಶ, ಹಾಗೆಯೇ ಯಾವುದೇ ಅಶಾಂತಿ ಉಂಟಾದರೆ ಆಯೋಜಕರು ಹೊಣೆ ಎಂಬಂತೆ ಖಾಲಿ ಬಾಂಡ್ ಪೇಪರ್‌ ಮೇಲೆ ಸಹಿ ಪಡೆಯುವುದು ಮುಂತಾದ ಷರತ್ತುಗಳನ್ನು ಪ್ರಕಟಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಭಯ ಪಾಟೀಲ, “ಬೆಳಗಾವಿಯಲ್ಲಿ ಈ ತರಹ ಹೊಸ ಷರತ್ತುಗಳು ಬೇಡ. ಯಾರಿಗೆ ನಿಯಮಗಳು ಒಪ್ಪಿಗೆ ಇದೆ ಅವರು ಪಾಲಿಸಬಹುದು. ಆದರೆ ಬಲವಂತವಾಗಿ ಮಾರ್ಗ ಬದಲಾವಣೆ ಮಾಡಿಸುವುದು, ಪಟಾಕಿ ನಿಷೇಧಿಸುವುದು ಸರಿಯಲ್ಲ. ಈ ಬಗ್ಗೆ ನಾವು ಕಮೀಷನರ್ ಅವರನ್ನು ಭೇಟಿಯಾಗಿ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ” ಎಂದು ತಿಳಿಸಿದರು.

ಗಣೇಶೋತ್ಸವ ಮಂಡಳಿಗಳು ಕೂಡ ಪೊಲೀಸರು ವಿಧಿಸಿರುವ ನಿಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಚರ್ಚೆ ನಂತರ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X