ಬೆಳಗಾವಿ | ರಾಮದುರ್ಗದಲ್ಲಿ ₹9.95 ಕೋಟಿ ವೆಚ್ಚದ ನೂತನ ನ್ಯಾಯಾಲಯ ಕಟ್ಟಡ ಉದ್ಘಾಟನೆ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ₹9.95 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ನ್ಯಾಯಾಲಯ ಕಟ್ಟಡವನ್ನು ಶನಿವಾರ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರು ಉದ್ಘಾಟಿಸಿದರು. “ಈ ನ್ಯಾಯಾಲಯದ ಸದುಪಯೋಗದಿಂದ ಇಲ್ಲಿನ ಜನರಿಗೆ ನ್ಯಾಯ ದೊರಕಬೇಕು,” ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.

ನ್ಯಾಯಮೂರ್ತಿ ಮುದಗಲ್ ಮಾತನಾಡುತ್ತಾ, “ರಾಮದುರ್ಗ ನ್ಯಾಯಾಲಯದಲ್ಲಿ 2500ಕ್ಕೂ ಹೆಚ್ಚು ಹಳೆಯ ಪ್ರಕರಣಗಳು ಬಾಕಿ ಇವೆ. ಇವುಗಳನ್ನು ಇತ್ಯರ್ಥಗೊಳಿಸಲು 30 ವರ್ಷಗಳಷ್ಟು ಸಮಯ ಬೇಕಾಗಬಹುದು. ವಕೀಲರು ಮತ್ತು ನ್ಯಾಯಮೂರ್ತಿಗಳು ಸಹಕರಿಸಿದರೆ ಈ ಕಾರ್ಯ ವೇಗವಾಗಬಹುದು, ವಕೀಲರು ಬುದ್ಧಿವಂತಿಕೆಯಷ್ಟೇ ಅಲ್ಲ, ಹೃದಯವಂತಿಕೆಯಿಂದ ಕೂಡಿರಬೇಕು. ಯಾವುದೇ ಒಳಒಪ್ಪಂದಗಳಿಲ್ಲದೆ ಕಕ್ಷಿದಾರರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಅಗತ್ಯ,” ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಮಾತನಾಡಿ, “ನ್ಯಾಯಾಂಗ ವ್ಯವಸ್ಥೆ ಶಕ್ತಿಯುತವಾಗಿದ್ದರೆ ದೇಶ ಶಾಂತಿಯುತವಾಗಿರುತ್ತದೆ. ನ್ಯಾಯಾಂಗಕ್ಕೆ ಮೂಲ ಸೌಲಭ್ಯ ಒದಗಿಸಲು ಸರ್ಕಾರ ಯಾವತ್ತೂ ಆದ್ಯತೆ ನೀಡಿದೆ,” ಎಂದು ಹೇಳಿದರು.

Advertisements

“ಲೋಕಾಪೂರ-ರಾಮದುರ್ಗ-ಧಾರವಾಡ ರೈಲು ಮಾರ್ಗದ ಸಮೀಕ್ಷೆಗೆ ಕೇಂದ್ರ ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ. ಇದರಿಂದ ಯಾತ್ರಾರ್ಥಿಗಳಿಗೆ ಸುಲಭ ಪ್ರಯಾಣ ಸಾಧ್ಯವಾಗಲಿದೆ,” ಎಂದರು.

ಈ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸಚಿನ್ ಮಗದುಮ್, ರಾಮಚಂದ್ರ ಹುದ್ದಾರ, ವಿಜಯಕುಮಾರ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ರಮೇಶ ಹಲ್ಯಾಳ, ಪಿಡಬ್ಲ್ಯುಡಿ ಅಧಿಕಾರಿ ರವಿಕುಮಾರ ನಂದಿಹಳ್ಳಿ, ನ್ಯಾಯಾಧೀಶ ಟಿ.ಎನ್. ಇನವಳ್ಳಿ ಮತ್ತು ಇತರ ಗಣ್ಯರು ಭಾಗವಹಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಶ್ರೀನಿವಾಸ ಕುರಡಗಿ ಮತ್ತು ರಶ್ಮಿ ಕುಲಕರ್ಣಿ ಮಾಡಿದರು. ವಿ.ಬಿ. ಸದಾಟಗಿಮಠ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X