ಬೆಳಗಾವಿ : ಹಿಡಕಲ್ ಜಲಾಶಯದಿಂದ ಹೆಚ್ಚುವರಿ ನೀರು ಬಿಡಬಾರದು: ಸಚಿವ ಸತೀಶ ಜಾರಕಿಹೊಳಿ

Date:

Advertisements

ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿ ನೀರನ್ನು ಬಿಡದಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇದರ ಕಾಮಗಾರಿ ಇನ್ನೂ ನಡೆಯುತ್ತಿದೆ. ಕೈಗಾರಿಕಾ ಅಗತ್ಯಕ್ಕಾಗಿ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಕುರಿತು ನೀರಾವರಿ ನಿಗಮದ ಅಧಿಕಾರಿಗಳು ಮೊದಲಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರ ಮಟ್ಟದ ಸಮಿತಿಯು 0.5 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಲು ತೀರ್ಮಾನಿಸಿದೆ,” ಈ ನಿರ್ಧಾರವನ್ನು ಗೌರವಿಸಿ, ನಿಗದಿಪಡಿಸಿರುವ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸಬಾರದು ಎಂಬ ಜವಾಬ್ದಾರಿ ಅಧಿಕಾರಿಗಳ ಮೇಲಿದೆ, ಎಂದು ಅವರು ಹೇಳಿದರು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಪೂರೈಸುವ ಸಂಬಂಧ ಜಲಾಶಯದಿಂದ ಹೆಚ್ಚಿನ ನೀರಿನ ಬೇಡಿಕೆ ಇರುವ ಪ್ರಸ್ತಾಪದ ಬಗ್ಗೆ ಮಾತನಾಡುತ್ತಾ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ,” ಎಂದು ಸಚಿವರು ಸ್ಪಷ್ಟಪಡಿಸಿದರು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X