ರಾಜ್ಯ ಸರ್ಕಾರದ ಕಾರ್ಯವೈಖರಿಯ ವಿರುದ್ಧವೇ ಸ್ವಪಕ್ಷದ ಶಾಸಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕ್ಷೇತ್ರದ ಶಾಸಕರಾದ ರಾಜು ಕಾಗೆ ಅವರು ಸರ್ಕಾರದ ನಿರ್ಲಕ್ಷ್ಯತೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಇದೇ ಎರಡು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಮನವಿಗಳ ಬಳಿಕವೂ ಅನುದಾನ ನೀಡಲಾಗುತ್ತಿಲ್ಲ. ಅಭಿವೃದ್ಧಿಯ ವಿಷಯದಲ್ಲಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಅವರು ಖುದ್ದಾಗಿ ಮಾಧ್ಯಮಗಳ ಮುಂದೆ ಭಾವುಕರಾಗಿ ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ಈ ರೀತಿಯ ಸ್ವಪಕ್ಷದ ಶಾಸಕರಿಂದಲೇ ಬರುವ ಟೀಕೆ, ಆಡಳಿತದ ಒಳಗಿನ ಅಸಮಾಧಾನಕ್ಕೆ ಬೆಳಕು ಚೆಲ್ಲಿದ್ದು, ಪಕ್ಷದ ಉನ್ನತ ನಾಯಕರಿಗೂ ಆತಂಕದ ವಿಚಾರವಾಗಿದೆ.
ಶಾಸಕ ರಾಜು ಕಾಗೆ ಅವರ ಆರೋಪಗಳು ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಿವೆ.