ಬೆಳಗಾವಿ | ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಆದ್ಯತೆ: ಅಶೋಕ ಪಟ್ಟಣ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಸೋಮವಾರ ಮುನವಳ್ಳಿ ಕೊಟುಮಚಗಿಯಿಂದ ಗೊಡಚಿ ಮಾರ್ಗದ ರಸ್ತೆಯ ₹6 ಕೋಟಿ ವೆಚ್ಚದಲ್ಲಿ ಸುಮಾರ 12 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಅಶೋಕ ಪಟ್ಟಣ “ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಖ್ಯ ರಸ್ತೆಗಳ ಜೊತೆಗೆ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಹಾಗೂ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಿದೆ” ಎಂದು ಹೇಳಿದರು.

“ರಾಮದುರ್ಗ ತಾಲ್ಲೂಕಿನ ರಸ್ತೆಗಳ ಸುಧಾರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನ ಅವರು ₹25 ಕೋಟಿ ಅನುದಾನ ನೀಡಿದ್ದಾರೆ. ಸಂಚಾರಕ್ಕೆ ಅಡಚಣೆಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು” ಎಂದು ಶಾಸಕ ಅಶೋಕ ಪಟ್ಟಣ ತಿಳಿಸಿದ್ದಾರೆ.

“ಕಾಮಗಾರಿ ಬೇಗ ಮುಗಿಸುವ ಅವಸರದಲ್ಲಿ ಮಾಡಿ ಹಾಗೂ ಹೆಚ್ಚಿನ ಲಾಭಕ್ಕಾಗಿ ಗುತ್ತಿಗೆದಾರರು ಕಳಪೆ ಕೆಲಸ ಮಾಡಿದರೆ ಸಹಿಸುವುದಿಲ್ಲ. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ. ಯಾವುದೇ ಸಮಸ್ಯೆಗಳಿದ್ದರೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಲು ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಯ ಸದಸ್ಯರು ಗಮನ ಹರಿಸಬೇಕು” ಎಂದು ಹೇಳಿದರು.

Advertisements

ಈ ಸಂದರ್ಭದಲ್ಲಿ ಗೊಡಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಕವ್ವ ವಗ್ಗರ, ಸದಸ್ಯರಾದ ಸಂಗಪ್ಪ ಪಾಕನಟ್ಟಿ, ಶಿವನಗೌಡ ಪಾಟೀಲ, ಈರಣ್ಣ ಕಾಮನ್ನವರ, ಗೊರವ, ಗುರುಬಾಯಿ ಪೂಜೇರ, ಸಾವಿತ್ರಿ ಜಾಮದಾರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಯಪ್ಪ ಕತ್ತಿ, ಜಿ.ಬಿ.ರಂಗನಗೌಡ್ರ, ಶಿದ್ದಿಂಗಪ್ಪ ಸಿಂಗಾರಗೊಪ್ಪ, ಪಿಡಿಒ ಚನ್ನಮ್ಮ ಕೊಪ್ಪದ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X