ಮುಂದಿನ ಜೂನ್ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.
ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ, ಕಂದಾಯ, ನೀರಾವರಿ, ತೋಟಗಾರಿಕೆ ಹಾಗೂ ಹೆಸ್ಕಾಂ ಇಲಾಖೆಗಳನ್ನೊಳಗೊಂಡ ತಂಡ ರಚಿಸಿ ನೀರಿನ ಲಭ್ಯತೆ ಹಾಗೂ ಅಗತ್ಯದ ಕುರಿತು ಸಮೀಕ್ಷೆ ನಡೆಸಬೇಕು ಎಂದರು.
ಜಲಾಶಯಗಳಲ್ಲಿ ಸಂಗ್ರಹವಿರುವ ನೀರಿಗೆ ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಬೇಕು. ಅಗತ್ಯವಿರುವ ಪ್ರದೇಶಗಳಿಗೆ ಸಮೀಕ್ಷಾ ವರದಿ ಆಧರಿಸಿ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಹಿಡಕಲ್ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ ಕಡಿಮೆಯಾಗಿಲ್ಲ ಎಂದರು.



