ಬೆಳಗಾವಿ | ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 8 ಲಕ್ಷ ಮೌಲ್ಯದ ವಸ್ತು ವಶ

Date:

Advertisements

ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು ನಡೆದ ಕಳ್ಳತನ ಪ್ರಕರಣ ದಾಖಲಾದ ನಂತರ, ತನಿಖೆ ಕೈಗೊಂಡ ಪೊಲೀಸರು ಸವದತ್ತಿ ತಾಲ್ಲೂಕಿನ ಹಿರೇಕೊಪ್ಪ ಗ್ರಾಮದ ಸಂಜು ದುಂಡಪ್ಪ ಬೋಳೆತ್ತಿನ ಮತ್ತು ಮಂಜುನಾಥ ಶೇಖಪ್ಪ ಹೊಂಗಲ ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹6.60 ಲಕ್ಷ ಮೌಲ್ಯದ ಬಂಗಾರ, ₹1.35 ಲಕ್ಷ ಬೆಲೆಬಾಳುವ ಬೆಳ್ಳಿಯ ಆಭರಣ ಹಾಗೂ ₹5 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಒಟ್ಟು ₹8 ಲಕ್ಷ ಮೌಲ್ಯದ ವಸ್ತುಗಳು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisements

ಅದರ ಜೊತೆಗೆ, ಸವದತ್ತಿ ಠಾಣೆಯ 3 ಪ್ರಕರಣಗಳು ಮತ್ತು ಬೈಲಹೊಂಗಲ ಠಾಣೆಯ 1 ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಬೆಳಗಾವಿ ಎಸ್‌ಪಿ, ಹೆಚ್ಚುವರಿ ಎಸ್‌ಪಿ, ರಾಮದುರ್ಗ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಸವದತ್ತಿ ಪಿಐ ಡಿ.ಎಸ್. ಧರ್ಮಟ್ಟಿ, ಪಿಎಸ್‌ಐ ಕಲ್ಮಶ ಬನ್ನೂರ, ಎಲ್.ಆರ್. ಗೌಡಿ ಮತ್ತು ಸಿಬ್ಬಂದಿ ಉದ್ದಪ್ಪ. ಎಚ್.ಪೂಜೇರಿ, ಅಮರ ಸಾರಾಪುರೆ, ಮಹೇಶ ಮಾಳಳ್ಳಿ, ಉಮೇಶ ಗಾಣಗಿ, ಎಂ.ಎಫ್. ಪಾಟೀಲ, ಎಲ್.ಪಿ. ಸುಣಧೋಳಿ, ವಿನೋದ ಟಕ್ಕಣ್ಣವರ, ಸಚಿನ ಪಾಟೀಲ ಹಲವರು ಯಶಸ್ವಿಯಾಗಿ ನಡೆಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X