ಬೆಳಗಾವಿ | ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ರೈತ ಆತ್ಮಹತ್ಯೆ

Date:

Advertisements

ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು.

ತಮ್ಮ ಪತ್ನಿಯ ಕ್ಯಾನ್ಸ‌ರ್ ಚಿಕಿತ್ಸೆಗೆ ವಿವಿಧ ಫೈನಾನ್ಸ್ ಕಂಪನಿಯಲ್ಲಿ ₹10 ಲಕ್ಷ ಸಾಲ ಮಾಡಿಕೊಂಡಿದ್ದರು. ಆದರೆ, ಆಸ್ಪತ್ರೆ ಖರ್ಚಿಗೆ ಹಣ ಹೊಂದಿಸುವುದರಲ್ಲೇ ಬೇಸರಗೊಂಡ ಶಿವನಪ್ಪ ಅವರು ಸಾಲದ ಕಂತು ಪಾವತಿಸಿರಲಿಲ್ಲ.

Advertisements

ಹೀಗಾಗಿ, ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಕಂಪನಿಯವರು ಆಗಾಗ ಪೋನ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಖಾಸಗಿ ಫೈನಾನ್ಸ್‌ ಕಂಪನಿ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ.

ಈ ಬಗ್ಗೆ ಹಾರೂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X