ಬೆಳಗಾವಿ | ಹಿಡಕಲ್ ಜಲಾಶಯ ಯೋಜನೆ ಡಿಕೆಶಿ ಮತ್ತು ಸತೀಶ ಜಾರಕಿಹೊಳಿ ಸಮರಕ್ಕೆ ಕಾರಣವಾಗುವುದೆ ?

Date:

Advertisements

ಬೆಳಗಾವಿ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಕಾಮಗಾರಿಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಕಾಮಗಾರಿ ಸ್ಟಾಪ್ ಮಾಡಿಸಿದ್ದರು. ಆದರೆ ಬೆಳಗಾವಿ ಜಿಲ್ಲೆಯ ಜನರ ವಿರೋಧವಿದ್ದರೂ ಇದೆ ಕಾಮಗಾರಿಯನ್ನು ಡಿಸಿಎಂ ಡಿಕೆ ಶಿವಕುಮಾರ ಅಸ್ತು ಅಂದಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಡಿಸಿಎಂ ಡಿಕೆಶಿ ಮತ್ತು ಸತೀಶ್ ಮಧ್ಯೆ ಮತ್ತೊಂದು ಹಂತದ ಸಮರಕ್ಕೆ ನಾಂದಿ ಹಾಡಿದೆ.

ಬೆಳಗವಿ ಜನರಿಗೆ ನೀರಿನ ಅಭಾವ ಆಗುವ ಸಾಧ್ಯತೆ ಇದೆ ಎಂದು ವಿವಿಧ ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದವು ಹಾಗಾಗಿ ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ವಾಟ‌ರ್ ಲಿಫ್ಟ್ ಕಾಮಗಾರಿ ನಿಲ್ಲಿಸಲಾಗಿತ್ತು. ಆದರೆ ಧಾರವಾಡಕ್ಕೆ ವಾಟರ್ ಲಿಫ್ಟ್ ಕಾಮಗಾರಿ ಮರು ಆರಂಭವಾಗಿದೆ.

110 ಕಿಮೀ ಪೈಪ್‌ಲೈನ್ ಅಳವಡಿಕೆಗೆ 350 ಕೋಟಿ ವೆಚ್ಚದ ಧಾರವಾಡ ಕೆಐಎಡಿಬಿ ಅಧಿಕಾರಿಗಳು ರೂಪಿಸಿದ್ದ ವಾಟರ್‌ ಲಿಫ್ಟ್ ಯೋಜನೆ ಸತೀಶ ಜಾರಕಿಹೊಳಿ, ಜಿಲ್ಲಾಡಳಿತ ಗಮನಕ್ಕೆ ತರದೇ ಮೂರು ತಿಂಗಳ ಹಿಂದೆ ಕಾಮಗಾರಿ ನಡೆದಿತ್ತು. ವಾಟರ್ ಲಿಫ್ಟ್‌ಗೆ ಕಾಮಗಾರಿಗೆ ಬೆಳಗಾವಿಯಲ್ಲಿ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾಡಳಿತ ಕಾಮಗಾರಿ ನಿಲ್ಲಿಸಿತು.

Advertisements

ಈಗ ಮತ್ತೇ ಜಲಸಂಪನ್ಮೂಲ ಇಲಾಖೆ ಈ ಯೋಜನೆ ಪುನರಾರಂಭಕ್ಕೆ ಡಿಕೆಶಿ ಅಸ್ತು ಎನ್ನಲಾಗಿದೆ. ಮತ್ತೇ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಗೋಕಾಕದಲ್ಲಿ ಕಾಮಗಾರಿ ಪುನರಾರಂಭಿದಲಾಗಿದೆ. ಜನಾಕ್ರೋಶ ವ್ಯಕ್ತವಾಗುವ ಭೀತಿ ಹಿನ್ನೆಲೆಯಲ್ಲಿ ಪೈಪ್ ಅಳವಡಿಕೆ ಕಾಮಗಾರಿ ವೇಗ ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X