ಬೆಳಗಾವಿ | ಐಪಿಎಲ್ ಕ್ರೀಕೆಟ್ ಅವಕಾಶ ನೀಡುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ಮೋಸ

Date:

Advertisements

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಲಿ ಗ್ರಾಮದ ರಾಕೇಶ ಭೀಮಪ್ಪ ಯಡೂರೆ ಮೋಸ ಹೋದವರು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಹೈದ್ರಾಬಾದ್‌ನಲ್ಲಿ ಜರುಗಿದ ರೈಸಿಂಗ್‌ ಭಾರತ್‌ ಕ್ರಿಕೆಟ್‌ ಲೀಗ್‌ (ಆರ್‌ಬಿಸಿಎಲ್‌) ಟೂರ್ನಿಯ ಆಯ್ಕೆ ಪ್ರಕ್ರಿಯೆಯಲ್ಲಿ ಟ್ರಯಲ್‌ ನೀಡಿದ್ದ ರಾಕೇಶ ಆಲ್‌ರೌಂಡರ್‌ ಆಟದ ಮೂಲಕ ಆಯೋಜಕರ ಗಮನ ಸಳೆದಿದ್ದರು. ಇದಾದ ನಂತರ ರಾಕೇಶ ಅವರ ಇನ್ಸಾಟಾಗ್ರಾಂ ಖಾತೆಗೆ ಅಪರಿಚಿತರು ಆಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂದೇಶ ಕಳುಹಿಸಿದ್ದಾರೆ. ಅಲ್ಲದೇ, ಹಣ ನೀಡಿದರೆ ಮುಂದಿನ ಐಪಿಎಲ್‌ನಲ್ಲಿ ಆಡಲು ಅವಕಾಶ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಅದನ್ನು ನಂಬಿದ ರಾಕೇಶ ತನ್ನ ಕುಟುಂಬಸ್ಥರಿಗೆ ಮಾಹಿತಿ ನೀಡಿ, ಹಣ ಹೊಂದಿಸಲು ಪ್ರಯತ್ನಿಸಿದ್ದಾನೆ. ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ರಾಕೇಶ ಅವರ ತಂದೆ ಭೀಮಪ್ಪ ಅವರು ಮಗನ ಭವಿಷ್ಯ ಉಜ್ವಲವಾದೀತೆಂದು ಸಾಲ ಮಾಡಿ 2024ರ ನವೆಂಬರ್‌ನಿಂದ 2025ರ ಏಪ್ರಿಲ್‌ 19ರ ವರೆಗೆ ಹಂತ ಹಂತವಾಗಿ ಒಟ್ಟು 24 ಲಕ್ಷ ರೂ.ಗಳನ್ನು ಅವರು ಸೂಚಿಸಿದ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಅಷ್ಟಾದರೂ ಮತ್ತೆ ಹಲವು ಕಾರಣಗಳನ್ನು ಹೇಳುತ್ತಾ ಹಣ ಕೇಳಿದಾಗ ಸಂಶಯ ಬಂದು, ರಾಕೇಶ ಯಡೂರೆ ಅವರು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X