ಬೆಳಗಾವಿ | ಪ್ರಿಯಕರನಿಂದ ಯುವತಿಯ ಹತ್ಯೆ

Date:

ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಯುವತಿಯನ್ನು ಹತ್ಯೆ ಮಾಡಿ ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಗಂಗವ್ವ ಹಂಚಿನಮನಿ (25) ಕೊಲೆಯಾದ ಯುವತಿ. ಹುಕ್ಕೇರಿ ತಾಲೂಕಿನ ರಾಜನಕಟ್ಟಿ ಗ್ರಾಮದ ಬಸವರಾಜ್ ಕರ್ನಾವರ್ (33) ಪ್ರಮುಖ ಆರೋಪಿಯಾಗಿದ್ದು, ತನ್ನ ತಂದೆ ಯಲ್ಲಪ್ಪ ಹಾಗೂ ಮಾವ ಲಗಮಪ್ಪ ಅವರೊಂದಿಗೆ ಸೇರಿ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಆರೋಪಿಗಳು ಗಂಗವ್ವಳನ್ನು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದು, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ತಿಲಾರಿ ಘಾಟ್ ಪ್ರದೇಶದ ದಟ್ಟ ಕಾಡಿನಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದರು.

ಮೇ 29ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಚಂದಗಡ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಟೋಲ್‌ಗೇಟ್‌ ದಾಖಲೆಗಳ ಆಧಾರದ ಮೇಲೆ ತನಿಖೆ ನಡೆಸಿದರು. ಮಹಿಳೆ ಕಾರಿನಲ್ಲಿ ತೆರಳಿದ್ದ ಮಾಹಿತಿ ದೊರೆತ ಬಳಿಕ ವಾಹನದ ಸಂಖ್ಯೆಯನ್ನು ಪತ್ತೆಹಚ್ಚಿ ಆರೋಪಿಗಳ ಸುಳಿವು ಕಂಡುಹಿಡಿದರು.

ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪೊಲೀಸರು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಬಳಿಕ ಸತತ ತನಿಖೆ ನಡೆಸಿ ಬಸರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ...

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...