ಬೆಳಗಾವಿ | ಪತಿಯ ಕೊಲೆ ಸಂಚು: ಪತ್ನಿ ಹಾಗೂ ಅವಳ ಪ್ರಿಯಕರ ಬಂಧನ, ತನಿಖೆ ಮುಂದುವರಿಕೆ

Date:

Advertisements

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಾಡಿಕೊಪ್ಪ ಬಳಿಯ ಶಿವನಗೌಡ ಪಾಟೀಲ (47) ಕೊಲೆ ಪ್ರಕರಣದಲ್ಲಿ ಹೊಸ ತಿರುವು ಮೂಡಿದ್ದು, ಈ ಪ್ರಕರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸಂಬಂಧಪಟ್ಟಿದ್ದಾರೆಂದು ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಏಪ್ರಿಲ್ 2 ರಂದು ಶಿವನಗೌಡ ಪಾಟೀಲನ ಪತ್ನಿ ಶೈಲಾ ಪಾಟೀಲ ಹಾಗೂ ಅವಳ ಪ್ರಿಯಕರ ರುದ್ರಪ್ಪ ಹೊಸಟ್ಟಿ ಸೇರಿ ಕೊಲೆ ನಡೆಸಿದ್ದಾರೆ. ಆರಂಭದಲ್ಲಿ ಇಬ್ಬರೂ ಊಟ ಮತ್ತು ಮದ್ಯ ಸೇವಿಸಿದ್ದಿದ್ದು, ತಂಪು ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಯತ್ನ ನಡೆದಿದೆ. ಆದರೆ, ವಿಷ ಸೇವಿಸಿದ ಬಳಿಕ ಶಿವನಗೌಡನು ವಾಂತಿ ಮಾಡಿದ್ದರಿಂದ ಯತ್ನ ವಿಫಲವಾಗಿತ್ತು. ಬಳಿಕ ರುದ್ರಪ್ಪ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ” ಎಂದು ವಿವರಿಸಿದರು.

ಶಿವನಗೌಡನ ಸಂಬಂಧಿಯಾಗಿರುವ ರುದ್ರಪ್ಪ, ಲಾರಿ ಚಾಲಕರಾಗಿದ್ದು, ಪಾಟೀಲ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ಈ ವೇಳೆ ಪತ್ನಿ ಶೈಲಾ ಪಾಟೀಲನೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ. ಇಬ್ಬರೂ ನಿರಂತರವಾಗಿ ಫೋನ್‌ ಕಾಲ್ ಹಾಗೂ ವಿಡಿಯೋ ಕಾಲ್‌ ಮೂಲಕ ಸಂಪರ್ಕದಲ್ಲಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

Advertisements

“ಪತ್ನಿಯೇ ಪ್ರಿಯಕರ ರುದ್ರಪ್ಪನಿಗೆ ಕೊಲೆ ಮಾಡಲು ಸೂಚನೆ ನೀಡಿದ್ದಳು. ಕೊಲೆಯ ಬಳಿಕ ರುದ್ರಪ್ಪ ಪರಾರಿಯಾಗಿದ್ದ. ಈಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಆರೋಪಿಗಳ ಭಾಗವಿದೆ ಎಂಬ ಅನುಮಾನವಿದ್ದು, ತನಿಖೆ ಮುಂದುವರಿಸಲಾಗಿದೆ” ಎಂದು ಎಸ್‌ಪಿ ಗುಳೇ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X