ಬೆಳಗಾವಿ | ಸೈಬರ್ ವಂಚನೆ: 50 ಲಕ್ಷ ರೂ. ಕಳೆದುಕೊಂಡ ದಂಪತಿ; ಪತ್ನಿಯನ್ನು‌ ಕೊಂದು‌ ವೃದ್ಧ ಆತ್ಮಹತ್ಯೆ

Date:

Advertisements

ಸೈಬರ್ ವಂಚನೆಗೆ ತುತ್ತಾಗಿ, 50 ಲಕ್ಷ ರೂ. ಕಳೆದುಕೊಂಡಿದ್ದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಸಮೀಪದ ಖಾನಾಪುರದಲ್ಲಿ ನಡೆದಿದೆ.

ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಎಂದು ಗುರುತಿಸಲಾಗಿದೆ.

ಸೈಬರ್ ವಂಚಕರು ದಂಪತಿಗೆ ಬೆದರಿಕೆ ಕರೆ ಮಾಡಿದ್ದು, 50 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡಿದ್ದಾರೆ. ಅಲ್ಲದೆ, ಪದೇ-ಪದೇ ಹಣಕ್ಕಾಗಿ ಬೇಡಿಕೆ ಇಟ್ಟು, ಕಿರುಕುಳ ನೀಡಿದ್ದಾರೆ. ಪರಿಣಾಮ ದಂಪತಿಗಳು ಇಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದರು ಎಂದು ಹೇಳಲಾಗಿದೆ.

Advertisements

ಡೆತ್ ನೋಟ್‌ ಬರೆದಿಟ್ಟಿರುವ ಡಯಾಗೋ ಸಂತಾನ್, ” ವ್ಯಕ್ತಿಯೊಬ್ಬರು ನಮಗೆ ಬೆದರಿಕೆ ಹಾಕಿದ್ದಾರೆ. ಸಿಮ್ ಕಾರ್ಡ್ ದುರುಪಯೋಗದ ಹೆಸರಿನಲ್ಲಿ ‘ಡಿಜಿಟಲ್ ಬಂಧನ’ ಮಾಡಲಾಗುತ್ತಿದೆ. ನಮ್ಮ ಬದುಕೇ ದುಸ್ತರವಾಗಿದೆ.ಗೋವಾದಲ್ಲಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿದ್ದೆವು. ಆ ಸಾಲದ ಹಣವನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕು” ಎಂದು ಹೇಳಿದ್ದಾರೆ.

ಡಯಾಗೋ ಅವರು ತಮ್ಮ ಪತ್ನಿಗೆ ವಿಷವುಣಿಸಿ, ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಲೇವಿಯಾನಾ ಅವರ ಮೃತದೇಹ ಮನೆಯೊಳಗೆ ಪತ್ತೆಯಾಗಿದೆ. ಡಿಯಾಗೋ ಅವರ ಮೃತದೇಹ ಮನೆಯ ನೀರಿನ ಟ್ಯಾಂಕ್‌ನಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಲೇದ್ ಹೇಳಿದ್ದಾರೆ.

ಮೃತದೇಹಗಳನ್ನು ಕಂಡ ನೆರೆಹೊರೆಯವರು ನಂದಗಡ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಬಂದು,ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X