ಬೆಳಗಾವಿ | ಮಹದಾಯಿ ನೀರಿಗಾಗಿ ಹೋರಾಟ ತೀವ್ರ: ಪ್ರಹ್ಲಾದ ಜೋಶಿ ಮನೆ ಮುಂದೆ ಧರಣಿಗೆ ರೈತ ಸೇನಾ ನಿರ್ಧಾರ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಮಹದಾಯಿ ನೀರಿನ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯ ವಿರುದ್ಧ ರೈತರು ಗಟ್ಟಿಯಾಗಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಮಹದಾಯಿ ಯೋಜನೆಗೆ ಮೂರು ತಿಂಗಳಲ್ಲಿ ಅನುಮತಿ ತರುತ್ತೇವೆ ಎಂದು ಭರವಸೆ ನೀಡಿದ್ದ ಪ್ರಹ್ಲಾದ ಜೋಶಿ, ಇದೀಗ ಜನತೆಗೂ ರೈತ ಸಮುದಾಯಕ್ಕೂ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

‘ಭರವಸೆ ಮುರಿದ ಕೇಂದ್ರ, ಹೋರಾಟ ಅನಿವಾರ್ಯ’

ಶಾಸಕರು ಮತ್ತು ಸಂಸದರು ಮಹದಾಯಿ ವಿಷಯದಲ್ಲಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಆದರೆ ಧಾರವಾಡ-ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಜನತೆಗೆ ನೀರಿನ ಅಗತ್ಯ ಅತ್ಯಂತ ಗಂಭೀರವಾಗಿದೆ. ಮಲಪ್ರಭಾ ನದಿಯಿಂದ ತುಂಬು ಪ್ರಮಾಣದಲ್ಲಿ ನೀರು ಒದಗಿಸುವಂತಾಗದೆ, ಮುಂದಿನ ಎರಡು ತಿಂಗಳಲ್ಲಿ ಅಣೆಕಟ್ಟು ಸಂಪೂರ್ಣ ಖಾಲಿಯಾಗುವ ಭೀತಿ ಎದುರಾಗಿದೆ ಎಂದು ವಿರೇಶ ಸೊಬರದಮಠ ಎಚ್ಚರಿಸಿದರು.

Advertisements

ಹೋಳಿಯ ಬಳಿಕ ಭಾರಿ ಹೋರಾಟ

ಮಹದಾಯಿ ನೀರಿಗಾಗಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದ್ದು, ಹೋಳಿ ಹಬ್ಬದ ನಂತರ ರೈತರು ಒಗ್ಗೂಡಿ ಧರಣಿಗೆ ಮುಂದಾಗಲಿದ್ದಾರೆ. ಪ್ರಹ್ಲಾದ ಜೋಶಿಯ ಮನೆ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಮಹದಾಯಿಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಒತ್ತಡ ಹೇರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

‘ಗೋವಾ ಸರ್ಕಾರದ ಅಡ್ಡಿ – ಕೇಂದ್ರದ ನಿರ್ಲಕ್ಷ್ಯ’

ಮಹದಾಯಿ ಯೋಜನೆಯ ಅಡಿಯಲ್ಲಿ 36 ಗ್ರಾಮಗಳ ಸ್ಥಳಾಂತರ, 300 ಕಿಲೋಮೀಟರ್ ಕಾಲುವೆ ನಿರ್ಮಾಣ ಮತ್ತು 2.25 ಲಕ್ಷ ಹೆಕ್ಟೇರ್ ಭೂಮಿ ನೀರಾವರಿ ಘೋಷಿಸಲಾಗಿದೆ. ಆದರೆ ಗೋವಾ ಸರ್ಕಾರ ಈ ಕುರಿತು ಸರಿಯಾದ ಮಾಹಿತಿ ಪಡೆಯದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಸೂಕ್ತ ವಿವರಗಳನ್ನು ನೀಡಿದರೂ, ಈ ವಿಚಾರದಲ್ಲಿ ಮುಂದುವರಿದ ಪ್ರಗತಿ ಕಂಡುಬಂದಿಲ್ಲ.

ನೀರಿಗಾಗಿ ಹೋರಾಟ ದುರದೃಷ್ಟಕರವಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಮಹದಾಯಿ ಹೋರಾಟವು ಜನಾಂದೋಲನ ರೂಪ ಪಡೆಯಬೇಕಾಗಿದೆ ಎಂದು ರೈತ ಸೇನಾ ಮುಖಂಡರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X