ಬೆಳಗಾವಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ

Date:

Advertisements

ಬೆಳಗಾವಿ ನಗರದ ಹೊಸ ಗಾಂಧಿ ನಗರದಲ್ಲಿ ಬುಧವಾರ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮಣ್ಣು ಕುಸಿತಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ಸರವಿ (38) ಹಾಗೂ ಶಿವಲಿಂಗ ಸರವಿ (20) ಎಂದು ಗುರುತಿಸಲಾಗಿದೆ. ಈ ಕಾಮಗಾರಿಯನ್ನು ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ನಡೆಸುತ್ತಿದೆ.

ಪೈ ರೆಸಾರ್ಟ್ ಹಿಂದಿನ ರಸ್ತೆಯಲ್ಲಿ ಪೈಪ್‌ಲೈನ್ ಅಳವಡಿಸಲು ಮೊದಲಿಗೆ ಜೆಸಿಬಿ ಯಂತ್ರದ ಸಹಾಯದಿಂದ ಮಣ್ಣು ತೋಡಲಾಗಿತ್ತು. ನಂತರ ಆಳವಾಗಿ ಪೈಪ್ ಅಳವಡಿಸಲು ಬಸವರಾಜ ಹಾಗೂ ಶಿವಲಿಂಗ ಬಾವಿ ರೂಪದ ತೆರೆದ ಒಳಗೆ ಇಳಿದಿದ್ದರು. ಈ ವೇಳೆ ಅಚಾನಕ್ ಮೇಲಿನಿಂದ ಮಣ್ಣು ಕುಸಿಯಿತು. ಅವರು ಇಬ್ಬರೂ ಅದರಡಿ ಸಿಲುಕಿದ್ರು.

Advertisements

ಘಟನೆ ಕಣ್ಣೆದುರೆಯಾಗಿ ಕಂಡು ಬೆಚ್ಚಿಬಿದ್ದ ಸಹಕಾರ್ಮಿಕರು ಹಾಗೂ ಸುತ್ತಮುತ್ತಲಿನ ನಾಗರಿಕರು ಸಹಾಯಕ್ಕೆ ಮುಂದಾದರೂ, ಮತ್ತಷ್ಟು ಮಣ್ಣು ಕುಸಿಯುವ ಭೀತಿಯಿಂದ ಯಾರೂ ತಕ್ಷಣವೇ ಕೆಳಗೆ ಇಳಿಯಲಿಲ್ಲ. ಕೆಲ ಹೊತ್ತಿನ ನಂತರ ಜೆಸಿಬಿಯ ಮೂಲಕ ಮಣ್ಣು ತೆಗೆದು ಕಾರ್ಮಿಕರನ್ನು ಹೊರತೆಗೆದು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಘಟನೆ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಎಂಬುದಾಗಿ ವೈದ್ಯರು ದೃಢಪಡಿಸಿದರು.

ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭದ್ರತೆ ಒದಗಿಸಿದರು ಹಾಗೂ ಜನರನ್ನು ನಿಯಂತ್ರಿಸಿದರು. ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X