ಬಳ್ಳಾರಿ | ಕೈಗಾರಿಕೆಗಳಲ್ಲಿ ಶೇ.70 ಹುದ್ದೆಗಳನ್ನು ಸ್ಥಳೀಯ ಕನ್ನಡಿಗರಿಗೆ ಮೀಸಲಿಡಲಿ: ನಾರಾಯಣಸ್ವಾಮಿ ಒತ್ತಾಯ

Date:

Advertisements

ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಒತ್ತಾಯಿಸಿದರು.

ಈ ಕುರಿತು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, “ತಾಲೂಕಿನ ಹಲಕುಂದಿ ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕುಡಿತಿನಿ, ತೋರಣಗಲ್ಲು, ಬೆಳಗಲ್ಲು, ಸಿಡಿಗಿನಮೊಳ ಮತ್ತು ಜಿಲ್ಲೆಯ ಇತರ ಕಡೆಗಳಲ್ಲಿ ಖಾಸಗಿ ಕಾರ್ಖಾನೆಗಳಿದ್ದು, ಆ ಕಾರ್ಖಾನೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರರಾಜ್ಯದಿಂದ ಬಂದವರಿಗೆ ಉದ್ಯೋಗವನ್ನು ನೀಡಿ ಸ್ಥಳೀಯರನ್ನು ಕಡೆಗಣಿಸಲಾಗಿದೆ. ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಸ್ಥಳೀಯರ ಸಂಖ್ಯೆ ಕಡಿಮೆಯಿದೆ. ನೆಲ, ಜಲ, ಊರು, ಕೇರಿ ನಮ್ಮದು ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ನಮ್ಮವರಲ್ಲ. ಇದೆಂಥ ದುರದೃಷ್ಟ! ಕೂಡಲೇ ಕಾರ್ಖಾನೆಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದರು.

ಈ ಭಾಗದಲ್ಲಿ ಖಾಸಗಿ ಕಾರ್ಖಾನೆಗಳು ಮುಂದುವರಿಯಬೇಕಾದರೆ ಸ್ಥಳೀಯರಿಗೆ ಉದ್ಯೋಗವಕಾಶ ನೀಡಲೇಬೇಕು. ಇಲ್ಲದಿದ್ದದಲ್ಲಿ ಕಾರ್ಖಾನೆಗಳು ಬಳ್ಳಾರಿ ಜಿಲ್ಲೆ ಮತ್ತು ತಾಲೂಕನ್ನು ತೊರೆದು ಬೇರೆ ಕಡೆ ಸ್ಥಳಾಂತರಗೊಳ್ಳಲಿ” ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿ: ಬಳ್ಳಾರಿ | ತೈಲ ಹೊರತೆಗೆಯುವ ಕಾರ್ಖಾನೆ ಮೇಲೆ ದಾಳಿ; 7 ಬಾಲ ಕಾರ್ಮಿಕರ ರಕ್ಷಣೆ

ಜಿಲ್ಲೆಯಾದ್ಯಂತ ಐಟಿಐ, ಡಿಪ್ಲಮಾ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ನಿರುದ್ಯೋಗಿ ಯುವ ಸಮೂಹವೇ ಇದೆ. ಅವರಿಗೆ ಕಾರ್ಖಾನೆಗಳಲ್ಲಿ ಉದ್ಯೋಗ ಕಲ್ಪಿಸುವ ಮೂಲಕ ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಕಾರ್ಖಾನೆಗಳ ಮಾಲೀಕರನ್ನು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X