ಬಳ್ಳಾರಿ | ಡಿಸೆಂಬರ್‌ಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Date:

Advertisements

ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.

ಜಿಲ್ಲಾಧಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಖಂಡ ಬಳ್ಳಾರಿಯಲ್ಲಿ ಈಗಾಗಲೇ 5 ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈ ಬಾರಿ 67 ವರ್ಷಗಳ ಬಳಿಕ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳೆರಡೂ ಜಂಟಿಯಾಗಿ ಸಮ್ಮೇಳನ ನಡೆಸಲಿವೆ. ಡಿಸೆಂಬರ್ ತಿಂಗಳಲ್ಲಿ ವಾತಾವರಣ ಮತ್ತು ಹವಮಾನವು ಊತ್ತಮವಾಗಿರುವುದರಿಂದ ಆಯೋಜನೆಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. 3 ದಿನಗಳ ಕಾರ್ಯಕ್ರಮ ಆಯೋಜಿಸಲಾಗುವುದು. ಶಾಸಕರು ಹಾಗೂ ಸಚಿವರೊಂದಿಗೆ ಚರ್ಚಿಸಿ ಸಮ್ಮೇಳನದ ದಿನಾಂಕ ನಿರ್ಧರಿಸಲಾಗುವುದು” ಎಂದರು.

“ಹಲವು ವರ್ಷಗಳ ಬಳಿಕ ಜಿಲ್ಲೆಯಲ್ಲಿ ಆಯೋಜನೆಯಾಗುತ್ತಿರುವ ಸಮ್ಮೇಳನಕ್ಕೆ ವಿಶೇಷ ಆಹ್ವಾನಿತರಾಗಿ ಬಳ್ಳಾರಿಯಲ್ಲಿ ಮೊದಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸರ್‌ ಥಾಮಸ್‌ ಮನ್ರೋ ಅವರ ಕುಟುಂಬಸ್ಥರು ಆಗಮಿಸಲಿದ್ದಾರೆ. ಇಂದಿನ ಪೀಳಿಗೆಗೆ ಮತ್ತು ಯುವಸಮುದಾಯಕ್ಕೆ ಕನ್ನಡ ಸಾಹಿತ್ಯದ ಬಗೆಗಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ” ಎಂದರು.

Advertisements

“ಈ ಸಮ್ಮೇಳನವು ಕನ್ನಡಿಗರ ಶೈಕ್ಷಣಿಕ ಮತ್ತು ಔದ್ಯೋಗಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮತ್ತು ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ್ದಾಗಲಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಕನ್ನಡ ಅನ್ನದ ಭಾಷೆ ಆಗಬೇಕು. ಇದರ ಕುರಿತ ಮೌಲ್ಯಾಧಾರಿತ ಚರ್ಚೆಗಳು ನಡೆಯಲಿವೆ. ಹಾವೇರಿ ಸಮ್ಮೇಳನದಲ್ಲಿ ಕೈಗೊಂಡಿದ್ದ ಸಮಗ್ರ ಕನ್ನಡ ಭಾಷಾ ವಿಧೇಯಕ ಜಾರಿಯ ನಿರ್ಣಯವನ್ನು ಸರ್ಕಾರ ಸಾಕಾರಗೊಳಿಸಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿ | ನೋಟಿಸ್ ನೀಡದೆ ಮನೆ ತೆರವು; ಪ್ರತಿಭಟನೆ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ ಜೆ ಶೋಭಾರಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X