ಬಳ್ಳಾರಿ | 40 ವರ್ಷಗಳಷ್ಟು ಹಳೆಯ ಚಿತ್ರಮಂದಿರದ ಕಟ್ಟಡದಲ್ಲಿ ಬಾಲಕಿಯರ ವಸತಿ ಶಾಲೆ

Date:

ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗಾಂಧಿ ತತ್ವಾಧಾರಿತ ಬಾಲಕಿಯರ ವಸತಿ ಶಾಲೆಯನ್ನು ಕಳೆದ ಮೂರು ವರ್ಷಗಳಿಂದ ಚಿತ್ರಮಂದಿರದ ಕಟ್ಟಡದಲ್ಲಿ ನಡೆಸಲಾಗುತ್ತಿದೆ.

- Advertisement -

ಇದು 40 ವರ್ಷಗಳಷ್ಟು ಹಳೆಯ ಚಿತ್ರಮಂದಿರ. ಈ ಮೊದಲು ಶಾಲೆ ಮತ್ತು ವಸತಿನಿಲಯ ನಡೆಯುತ್ತಿದ್ದ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಸ್ವಂತ ಕಟ್ಟಡ ಇಲ್ಲದ ಕಾರಣ ಹಳೆಯ ಚಿತ್ರಮಂದಿರದ ಕಟ್ಟಡದಲ್ಲೇ ವಸತಿ ಶಾಲೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿಯವರೆಗಿನ 226 ವಿದ್ಯಾರ್ಥಿನಿಯರಿದ್ದಾರೆ. ಒಂದೇ ಸಭಾಂಗಣದಲ್ಲಿ ಎರಡರಿಂದ ಮೂರು ತರಗತಿ ನಡೆಸಲಾಗುತ್ತಿದೆ. ಎಲ್ಲರಿಗೂ ಒಂದೆಡೆಯೇ ಪಾಠ ಮಾಡುವುದರಿಂದ ನಮಗೆ ಸರಿಯಾಗಿ ಅರ್ಥವಾಗುತ್ತಿಲ್ಲ ಎನ್ನುತ್ತಾರೆ ವಿದ್ಯಾರ್ಥಿನಿಯರು.

ಜಿಲ್ಲಾ ಪರಿಷತ್ ಬಾಲಕಿಯರ ಪ್ರೌಢಶಾಲೆ ಹೆಸರಿನಲ್ಲಿ 1996ರಲ್ಲಿ ಈ ಶಾಲೆ ಪ್ರಾರಂಭವಾಗಿದೆ. ನಂತರ ಗಾಂಧಿ ತತ್ವ ಆಧಾರಿತ ಬಾಲಕಿಯರ ವಸತಿ ಶಾಲೆಯಾಗಿ 2011-12ರಲ್ಲಿ ಮೇಲ್ದರ್ಜೆಗೇರಿಸಿ, ಸಮಾಜ ಕಲ್ಯಾಣ ಇಲಾಖೆಗೆ ಸೇರ್ಪಡೆ ಮಾಡಲಾಯಿತು. 2012-13ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅನುದಾನದೊಂದಿಗೆ, ಕರ್ನಾಟಕ ವಸತಿ ಶಿಕ್ಷಣಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಇದೇ ಮಾದರಿಯಲ್ಲಿ ಜಿಲ್ಲೆಯ ಚೆಳ್ಳಗುರ್ಕಿ ಗ್ರಾಮದಲ್ಲೂ ಮತ್ತೊಂದು ಶಾಲೆ ಇದೆ. ಅಲ್ಲಿ ಎರ್ರೀತಾತ ಮಠದ ಕೊಠಡಿಗಳಲ್ಲಿ ಶಾಲೆ ನಡೆಯುತ್ತಿದೆ. ಕುರುಗೋಡು ಮತ್ತು ಚೆಳ್ಳಗುರ್ಕಿಯ ಎರಡೂ ಶಾಲೆಗಳಿಗೂ ಸ್ವಂತ ಕಟ್ಟಡಗಳಿಲ್ಲ.

ಕುರುಗೋಡು ವಿವಿಧ ಬಡಾವಣೆಗಳಲ್ಲಿ ಪರಿಶೀಲಿಸಿದರೂ ಸೂಕ್ತ ಕಟ್ಟಡ ಸಿಗಲಿಲ್ಲ. ಆದ್ದರಿಂದ ತಿಂಗಳಿಗೆ ₹1.20 ಲಕ್ಷ ಬಾಡಿಗೆ ಕೊಟ್ಟು ಈ ಕಟ್ಟಡದಲ್ಲಿ ಶಾಲೆ ನಡೆಸಲಾಗುತ್ತಿದೆ ಎಂದು ವಸತಿ ಶಾಲೆಯ ಪ್ರಾಚಾರ್ಯ ವಿಶ್ವನಾಥ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸೌಲಭ್ಯಗಳಿಲ್ಲದ ಹಳೆ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತದೆ. ಏನಾದರೂ ಅಚಾತುರ್ಯ ಸಂಭವಿಸಿದರೆ ಯಾರು ಹೊಣೆ? ನಮ್ಮ ಮಕ್ಕಳಿಗೆ ಸೂಕ್ತ ಸೌಲಭ್ಯ, ರಕ್ಷಣೆ ಒದಗಿಸಿ ಎಂದು ಮಕ್ಕಳ ಪೋಷಕರು ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...