ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

Date:

ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪದಡಿ ಬಳ್ಳಾರಿ ಜಿಲ್ಲಾ ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷ ಎ ರಾಮಕೃಷ್ಣ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

- Advertisement -

ಸಂಘದ ಹಾಲಿ ಅಧ್ಯಕ್ಷ ಎ.ರಾಮಕೃಷ್ಣ ಕಳೆದ ಒಂದು ವರ್ಷದಿಂದ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಂಘದ 11 ಜನ ನಿರ್ದೇಶಕರು ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಂಘದ ನೋಂದಣಾಧಿಕಾರಿಗಳು ಹಾಗೂ ಉಪನಿಬಂಧಕರಿಗೆ ಕಳೆದ 15 ದಿನಗಳ ಹಿಂದೆ ದೂರು ಸಲ್ಲಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಸಂಘದ ಹಾಲಿ ಅಧ್ಯಕ್ಷರ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಅವರ ಮೇಲೆ ಸೂಕ್ತ ಕ್ರಮ ಕ್ರಮಕೈಗೊಳ್ಳಬೇಕು. ಸಂಘದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

“ಕಳೆದ ವರ್ಷ ಸೊಸೈಟಿಯಲ್ಲಿ ಚುನಾವಣೆ ನಡೆದು 11 ಜನ ಚುನಾಯಿತ ನಿರ್ದೇಶಕರುಗಳು ಮತದಾನ ಮಾಡುವ ಮೂಲಕ ಪ್ರತಿಸ್ಪರ್ಧಿ ಶೀಲಾ ಬ್ರಹ್ಮಯ್ಯ ಅವರ ವಿರುದ್ಧ ರಾಮಕೃಷ್ಣ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು. ಅಧ್ಯಕ್ಷರಾಗಿ ಆಯ್ಕೆಯಾದ ರಾಮಕೃಷ್ಣ ಅವರು ನಿರ್ದೇಶಕರ ಗಮನಕ್ಕೆ ತರದೆ ಅನುಕೂಲಕ್ಕೆ ತಕ್ಕಂತೆ ಸಭೆಗಳನ್ನು ಕರೆದು ನಿರ್ಣಯ ತೆಗೆದುಕೊಳ್ಳುತ್ತಾರೆ” ಎಂದು ಆರೋಪಿಸಲಾಗಿದೆ.

“ಈ ಹಿಂದಿನ ಅಧ್ಯಕ್ಷರು ನಡೆಸಿದ ಅಕ್ರಮಗಳ ಬಗ್ಗೆ ಹಾಗ ಎಲ್ಲರೂ ಸುಮ್ಮನಿದ್ದು ಈಗ ಯಾಕೆ ಮಾತನಾಡುತ್ತಿರಾ? ಎಂದು ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಸಂಘದ ಕಟ್ಟಡದಿಂದ ಪ್ರತಿ ತಿಂಗಳು ಸುಮಾರು 1.50 ಲಕ್ಷ ರೂಪಾಯಿಗಳ ಬಾಡಿಗೆ ಹಣವನ್ನು ಸರಿಯಾಗಿ ಸಂಘದ ಬ್ಯಾಂಕ್ ಖಾತೆಗೆ ಜಮಾ ಮಾಡದೇ ಸ್ವಂತಕ್ಕೆ ಬಳಸುತ್ತಿದ್ದಾರೆ. ಕೈಮಗ್ಗದಲ್ಲಿ ಉತ್ಪತ್ತಿಯಾದ ಕಾಟನ್ ಬಟ್ಟೆಗಳನ್ನು ಮನಸೋ ಇಚ್ಛೆ ಮಾರಾಟ ಮಾಡಿ ಇದರಿಂದ ಸಂಘಕ್ಕೆ ನಷ್ಟವುಂಟು ಮಾಡುತ್ತಿದ್ದಾರೆ. ಸಂಘದ ಆವರಣದಲ್ಲಿರುವ ಗುಜರಿ ಅಂಗಡಿಯನ್ನು ತೆರವುಗೊಳಿಸುವಂತೆ ಸಭೆಯಲ್ಲಿ ಎಲ್ಲಾ ನಿರ್ದೇಶಕರು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ, ಅಧ್ಯಕ್ಷರು ಗುಜರಿ ಅಂಗಡಿ ಮಾಲಿಕರಿಂದ 2 ಲಕ್ಷ ಲಂಚ ಸ್ವೀಕರಿಸಿದ್ದು ಸ್ಥಳಾಂತರಗೊಳಿಸದೇ ನೆಪ ಹೇಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇವರ ಎಲ್ಲಾ ಅವ್ಯವಹಾರಕ್ಕೆ ಕಾರ್ಯದರ್ಶಿ ರಂಗಸ್ವಾಮಿ ಬೆಂಬಲವಾಗಿ ನಿಂತಿದ್ದಾರೆ. ಇವರಿಬ್ಬರನ್ನು ಕೂಡಲೇ ಸಂಘದಿಂದ ವಜಾಗೊಳಿಸಲು ಕ್ರಮಕೈಗೊಳ್ಳಬೇಕು. 2019ರಿಂದ ಇಲ್ಲಿಯವರೆಗೂ ಸುಮಾರು ರೂ 13,66,699/- ಅಕ್ರಮ ವ್ಯವಹಾರ ನಡೆದಿದೆ. ಈ ಬಗ್ಗೆ ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆದು ಅದನ್ನು ಎ ರಾಮಕೃಷ್ಣ ಅವರಿಂದ ಸಂಘದ ನಷ್ಟ ಭರಿಸುವಂತೆ ನ್ಯಾಯಾಲಯ ಆದೇಶಿಸಿದ್ದರೂ ಇಲ್ಲಿಯ ತನಕ ಸಂಘಕ್ಕೆ ನಷ್ಟ ಪಾವತಿಸಿಲ್ಲ. ಎರಡನೇ ಅವಧಿಗೂ ಅಧ್ಯಕ್ಷ ಸ್ಥಾನಕ್ಕೇರಿದ್ದು, ಸಂಘದ ಅಧಿನಿಯಮದ ಪ್ರಕಾರ ಕಾನೂನು ಬಾಹಿರವಾಗಿರುತ್ತದೆ. ಸರಕಾರಕ್ಕೆ ಪಾವತಿಸಬೇಕಾದ ಸೊಸೈಟಿಯ ರೂ.24 ಲಕ್ಷ ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದ್ದಾರೆ” ಎಂದು ಆರೋಪಿದರು.

ಇದನ್ನೂ ಓದಿ: ಬಳ್ಳಾರಿ | ದಲಿತರಿಗೆ ಸೇರಿದ ಜಾಗ, ಬಾವಿ ಅತಿಕ್ರಮಣ; ತೆರವಿಗೆ ಪಿ ಶೇಖರ್ ಆಗ್ರಹ

ಈ ಸಂದರ್ಭದಲ್ಲಿ ರಾಟಾಲ ಮಂಜುನಾಥ, ಓಬುಳಾಪತಿ, ಎಸ್ ನಾಗರಾಜ್, ಜಕ್ಕ ಲಕ್ಷ್ಮಿ ನಾರಾಯಣ, ಶೇಷಾದ್ರಿ, ಜಿ ಮುರುಳಿ, ಕೆ.ಎನ್ ನಾಗರಾಜ್, ಕೋನಯ್ಯ, ಎಸ್ ಲಕ್ಷ್ಮಿದೇವಿ, ಎನ್ ಪದ್ಮಾವತಿ, ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...