ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ, ಜಿಲ್ಲಾಡಳಿತ ನೋಟಿಸ್ ನೀಡಿದರೂ ತಲೆಕೆಡಿಸಿಕೊಳ್ಳದೇ ಮನೆ ಮಾಲೀಕ ನಿರ್ಲಕ್ಷ್ಯ ತೋರಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಬಿ.ಪಂಪಾಪತಿ ಎಂಬುವವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಇದು ನಮ್ಮ ಪೂರ್ವಜರ ಆಸ್ತಿ ಎಂದು ಪಂಪಾಪತಿ ವಾದ ಮಾಡುತ್ತಿದ್ದಾರೆ. ವಡ್ಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸಾಪುರ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಲು ಜಾಗ ನಿಗದಿ ಮಾಡಲಾಗಿತ್ತು. ಆದರೆ, ಅಂಗನವಾಡಿ ನಿರ್ಮಾಣ ಆಗ ಬೇಕಿದ್ದ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗಿದೆ.
ಖಾತ ನಂ. 368 ಜಾಗ ಒತ್ತುವರಿ ಮಾಡಿ ಮನೆಗಳ ನಿರ್ಮಾಣ ಮಾಡಲಾಗಿದೆ. ಬಿ.ಪಂಪಾಪತಿ ಎಂಬುವವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿದ್ದಾರೆ. ಮನೆ ನಿರ್ಮಾಣ ಆದ ಜಾಗ ಪಂಚಾಯ್ತಿಗೆ ಸೇರಿದ್ದು ಎಂದು ಮನೆಗಳ ತೆರವಿಗೆ ಹೈಕೋರ್ಟ್ ಆದೇಶ ಮಾಡಿದರೂ ಮನೆ ಮಾಲೀಕ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ.
ಜಿಲ್ಲಾಡಳಿತ ನೋಟಿಸ್ಗಳಿಗೂ ತಲೆಬಾಗದೆ ಒತ್ತುವರಿ ಜಾಗದಲ್ಲಿ ಹೈಪೈ ಮನೆಗಳ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಜಾಗ ಸರ್ವೆಗೆ ಬಂದ ಅಧಿಕಾರಿಗಳ ಮೇಲೂ ಮನೆ ಮಾಲೀಕ ಪಂಪಾಪತಿ ದರ್ಪ ಮೆರೆದಿದ್ದಾರೆ. ಇದು ನಮ್ಮ ಪೂರ್ವಾಜಿತರ ಆಸ್ತಿ. ರಾಜಕೀಯ ಷಡ್ಯಂತರದಿಂದ ದೌರ್ಜನ್ಯ ಆಗ್ತಿದೆ ಎಂದು ಕಣ್ಣೀರು ಹಾಕಿದ್ದಾರೆ. ನಿನ್ನೆ ಅಂಗನವಾಡಿ ತೆರೆಯುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತೆ. ಹೀಗಾಗಿ ಮಕ್ಕಳ ಭವಿಷ್ಯಕ್ಕಾಗಿ ಜಾಗ ಬಿಟ್ಟು ಕೊಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.