ಬಳ್ಳಾರಿ | ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರ ಬಳಕೆ; ಅಸಮಾಧಾನ

Date:

Advertisements

ಅಂಗನವಾಡಿ ನೌಕರರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ನಿಯೋಜಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆ ಕಾರ್ಯಕ್ಕೆ ಅಂಗನವಾಡಿ ನೌಕರರನ್ನು ನಿಯೋಜಿಸಲಾಗಿದ್ದು, ಬಳ್ಳಾರಿಯ ಆಶಾ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು, ಇತರ ಸಿಬ್ಬಂದಿ ಸೇರಿದಂತೆ 1.20ಲಕ್ಷ ಮಂದಿಯನ್ನು ‘ಗ್ಯಾರಂಟಿ ಸ್ವಯಂ ಸೇವಕ’ ರನ್ನಾಗಿ ನಿಯೋಜಿಸಲಾಗಿದೆ.. ಫೆಬ್ರುವರಿ 26ರಿಂದ ಸಮೀಕ್ಷೆ ಆರಂಭವಾಗಿದ್ದು, 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

ಮೊಬೈಲ್ ಅಪ್ಲಿಕೇಷನ್ ಆಧಾರಿತ ಸಮೀಕ್ಷೆ ಇದಾಗಿದ್ದು, ಅಂಗನವಾಡಿ ನೌಕರರು ನಿಗದಿಪಡಿಸಿದ ಮನೆಗಳಿಗೆ ತೆರಳಿ ಐದು ಗ್ಯಾರಂಟಿಗಳ ಕುರಿತು ಪ್ರತಿಯೊಬ್ಬರ ಬಳಿ 35ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿ, ಉತ್ತರ ದಾಖಲಿಸಿಕೊಳ್ಳಬೇಕು.

Advertisements

ಸಮಗ್ರ ಶಿಶು ಅಭಿವೃದ್ಧಿಯ ಯೋಜನೆಯ ಕೆಲಸಗಳ ಜೊತೆ ಸಮೀಕ್ಷೆಯನ್ನೂ ನಡೆಸುವಂತೆ ಸರ್ಕಾರ ಸೂಚಿಸಿದೆ. ಆದರೆ, ಇದರಿಂದ ನಮ್ಮ ಮೂಲ ಕೆಲಸಕ್ಕೆ ತೊಂದರೆಯಾಗುತ್ತಿದೆ ಎಂದು ಅಂಗನವಾಡಿ ನೌಕರು ತಮ್ಮ ಅಳಲು ಹೊರಹಾಕುತ್ತಿದ್ದಾರೆ.

ಬೆಳಗ್ಗೆ 10ರವರೆಗೆ ಸಮೀಕ್ಷೆ, ನಂತರ ಕೆಲಸಕ್ಕೆ ಹಾಜರಾಗಬೇಕು. ಸಂಜೆ 5ರಿಂದ ಮತ್ತೇ ಸಮೀಕ್ಷೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಇನ್ನೂ ಹಲವರಿಗೆ ಸ್ಮಾರ್ಟ್‌ಫೋನ್‌ ಬಳಕೆ ಗೊತ್ತಿಲ್ಲ ಇವರುಗಳಿಗೆ ಸಮೀಕ್ಷೆ ಕಾರ್ಯ ಕಷ್ಟ. ಗ್ಯಾರಂಟಿಗಳಿಂದ ವಂಚಿತರು ಹೋದಲ್ಲೇಲ್ಲಾ ಕಿರಿಕಿರಿ ಮಾಡುತ್ತಾರೆ. ಅವರುಗಳಿಗೆ ಉತ್ತರಿಸಲಾಗದೇ ಹಲವು ಸಮಸ್ಯೆ, ಸವಾಲು ಎದುರಿಸಬೇಕಾಗಿದೆ ಎಂದು ಮಾಧ್ಯಮದವರ ಮುಂದೆ ಅಂಗನವಾಡಿ ನೌಕರರು ಬೇಸರ ತೋಡಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X