ಬಳ್ಳಾರಿ | ಚುನಾವಣೆಗೆ ಮುನ್ನವೇ ಪದವೀಧರರನ್ನು ಸೆಳೆಯುವ ಯತ್ನ; ಪ್ರತ್ಯೇಕ ಮತ ಬ್ಯಾಂಕ್‌ ಸೃಷ್ಟಿ

Date:

ಈಶಾನ್ಯ ಪದವೀಧರರ ಮತಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಕೃತ ಗೆಜೆಟ್ ನೊಟಿಫಿಕೇಶನ್ ಹೊರಡಿಸದೆ ಇದ್ದರೂ, ಬಳ್ಳಾರಿ ಜಿಲ್ಲೆಯಲ್ಲಿನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಸಂಘ ಸಂಸ್ಥೆಗಳು ಈಶಾನ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪದವೀಧರರ ಮನೆ ಮನೆಗೆ ತೆರಳಿ ಮತದಾರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಿ ಗುರುತಿನ ಚೀಟಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿ ಪದವೀಧರರನ್ನು ಸೆಳೆಯಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.

- Advertisement -

ಮುಂಬರುವ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ಮತದಾನದ ಗುರುತಿನ ಚೀಟಿಗೆ ಹೆಸರು ಸೇರ್ಪಡೆ ಮಾಡಲು ಪದವೀಧರರಿಂದ ಪದವಿ ಪೂರ್ಣಗೊಳಿಸಿದವರಿಗೆ ನೋಂದಣಿಗೆ ಆಧಾರ್ ಕಾರ್ಡ್, ಪದವೀಧರರ ಅಂತಿಮ ವರ್ಷದ ಅಂಕಪಟ್ಟಿ ಮತದಾರರ ಗುರುತಿನ ಚೀಟಿ ಹಾಗೂ ಎರಡು ಭಾವಚಿತ್ರಗಳನ್ನು ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು, ಸಂಘ ಸಂಸ್ಥೆಗಳ ಮುಖಂಡರು ತಮ್ಮ ತಮ್ಮ ಬೆಂಬಲಿಗರಿಂದ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪದವೀಧರರಿಗೆ ಪದವೀಧರ ಕ್ಷೇತ್ರದ ಮತ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ಚುನಾವಣೆ ಗುರುತಿನ ಚೀಟಿ ಮಾಡಿಸಿ ಕೊಡುವುದಾಗಿ ಪದವೀಧರರ ಹತ್ತಿರ ಅಗತ್ಯ ದಾಖಲೆಗಳನ್ನು ಕಲೆ ಹಾಕುವ ಮೂಲಕ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಪ್ರತ್ಯೇಕ ವೋಟ್ ಬ್ಯಾಂಕ್ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ” ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಅರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

“ರಾಜ್ಯ ಸರ್ಕಾರ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಗೆಜೆಟ್ ನೊಟಿಫಿಕೇಶನ್ ಹೊರಡಿಸಿಲ್ಲ. ಒಂದು ವೇಳೆ ಹೊರಡಿಸಿದರೂ ಪ್ರತ್ಯೇಕ ಮಾರ್ಗಸೂಚಿಗಳನ್ನು ತಿಳಿಸುತ್ತದೆ. ಹಾಗೂ ಚುನಾವಣೆ ಆಯೋಗದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಸಮಯವಕಾಶ ನೀಡುತ್ತದೆ. ಬಳ್ಳಾರಿಯಲ್ಲಿ ಪದವೀಧರರ ನೋಂದಣಿ ಹೆಸರಿನಲ್ಲಿ ರಾಜಕಾರಣಿಗಳು ಪದವೀಧರರಿಂದ ಅಗತ್ಯ ದಾಖಲೆ ಪಡೆಯುತ್ತಿದ್ದಾರೆ. ಪ್ರತ್ಯೇಕ ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ” ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...