ಬಳ್ಳಾರಿ | ಪ್ರಿಯಾಂಕ್ ಖರ್ಗೆ ಬಗ್ಗೆ ಅವಹೇಳನ; ಬಿಜೆಪಿಗರ ವಿಧಾನ ಪರಿಷತ್‌ ಸದಸ್ಯತ್ವ ವಜಾಕ್ಕೆ ಎ ಮಾನಸಯ್ಯ ಅಗ್ರಹ

Date:

ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ಚಿತಾವಣೆಯಿಂದ ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಪ್ರಿಯಾಂಕ್ ಖರ್ಗೆರವರನ್ನು ವೈಯಕ್ತಿಕವಾಗಿ ಅವಹೇಳನ ಮಾಡಿರುವುದು ತೀವ್ರ ಖಂಡನೀಯ. ಈ ಕೂಡಲೇ ಇಬ್ಬರನ್ನೂ ವಿಧಾನ ಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು ಎಂದು ಡಿಎಸ್‌ಎಸ್ ಮುಖಂಡ ಎ ಮಾನಸಯ್ಯ ಆಗ್ರಹಿಸಿದರು.

- Advertisement -

ಬಳ್ಳಾರಿ ನಗರದಲ್ಲಿ ಜಿಲ್ಲಾಡಳಿತ ಕಚೇರಿ ಎದುರು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ದಲಿತ, ಹಿಂದುಳಿದ, ಅಲ್ಪಸಂಖ್ಯಾತ ನಾಯಕರ ಏಳಿಗೆಯನ್ನು ಸಹಿಸದ ಬಿಜೆಪಿಗರ ದಲಿತ ವಿರೋಧಿ ನೀತಿ ಖಂಡನಿಯ. ಪ್ರಸ್ತುತ ಕರ್ನಾಟಕದ ರಾಜಕಾರಣದಲ್ಲಿ ಸಂವಿಧಾನಬದ್ಧ ಪ್ರಗತಿಪರ ಚಿಂತನೆ ಮಾಡುತ್ತ ಸಮಾಜಪರ, ಜನಪರ, ಜೀವಪರ ಚಿಂತನೆಯುಳ್ಳ ಸ್ವಾಭಿಮಾನಿ ಪ್ರಿಯಾಂಕ್ ಖರ್ಗೆಯವರು ಮನುವಾದಿ ಬಿಜೆಪಿ, ಆರ್‌ಎಸ್‌ಎಸ್‌, ಕೋಮುವಾದಿ ಸಂಘ ಪರಿವಾರದವರನ್ನು ವಿಧಾನಸೌಧದ ಒಳಗೆ ಹಾಗೂ ಹೊರಗೆ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ಖರ್ಗೆಯವರು ಸಾರ್ವಜನಿಕವಾಗಿ ಕೇಳಿರುವ ಸಂವಿಧಾನಬದ್ಧವಾದ ಸೈದ್ಧಾಂತಿಕ ಪ್ರಶ್ನೆಗಳಿಗೆ ಉತ್ತರ ನೀಡುವ ನೈತಿಕತೆ ಇಲ್ಲದ ಮನುವಾದಿಗಳು ವೈಯಕ್ತಿಕ ನಿಂದನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 1

“ಖರ್ಗೆರವರ ದಿಟ್ಟತನದೆದುರು ಸೋತಿರುವ ಮನುವಾದಿಗಳು ಸೋಲನ್ನು ಮುಚ್ಚಿಕೊಳ್ಳುವ ಸಲುವಾಗಿ ಮನುವಾದಿ ಬಿಜೆಪಿ, ಆರ್‌ಎಸ್‌ಎಸ್, ಸಂಘ ಪರಿವಾರಕ್ಕೆ ತಮ್ಮ ಸ್ವಾಭಿಮಾನವನ್ನು ಅಡವಿಟ್ಟು, ಮಾನಸಿಕ ಗುಲಾಮಗಾರಿಕೆಗೆ ಒಳಗಾಗಿ ಸ್ವಾರ್ಥಕ್ಕಾಗಿ ಜೀತ ಮಾಡುತ್ತಿರುವ ಅಂಬೇಡ್ಕರ್ ವಿರೋಧಿ ಅನೇಕ ದಲಿತ ಮನುವಾದಿಗಳಲ್ಲಿ ಒಬ್ಬರಾಗಿರುವ ಅಂಬೇಡ್ಕರ್ ದ್ರೋಹಿ, ದಲಿತ ಸಮುದಾಯ ವಂಚಕ ಛಲವಾದಿ ಅಲ್ಲ, ಮನುವಾದಿ ನಾರಾಯಣಸ್ವಾಮಿಯಿಂದ ಪ್ರಿಯಾಂಕ್ ಖರ್ಗೆಯವರ ವಿರುದ್ಧ ಹೇಳಿಕೆಗಳನ್ನು ಕೊಡಿಸುತ್ತಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಹಲವು ಬೇಡಿಕೆ ಈಡೇರಿಕೆಗೆ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ

ಛಲವಾದಿ ಮಹಾಸಭಾ ರಾಜ್ಯ ಉಪಾಧ್ಯಕ್ಷ ಸಿ ನರಸಪ್ಪ ಮಾತನಾಡಿ, “ವಿರೋಧ ಪಕ್ಷದ ನಾಯಕರೆನಿಸಿಕೊಂಡಿರುವ ನಾರಾಯಣಸ್ವಾಮಿ ಸಂವಿಧಾನಬದ್ಧ ಹುದ್ದೆಗೆ ಚ್ಯುತಿ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಆ ಹುದ್ದೆಯ ಘನತೆಗೆ ಧಕ್ಕೆ ತಂದಿರುವ ಕಾರಣ ವಿಧಾನ ಪರಿಷತ್ ಸದಸ್ಯತ್ವದಿಂದ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಅವರನ್ನು ಈ ಕೂಡಲೇ ವಜಾಗೊಳಿಸಬೇಕು. ಕಲಬುರಗಿಯ ದಕ್ಷ ಜಿಲ್ಲಾಧಿಕಾರಿಗೆ ಅವಮಾನಕರ ಹೇಳಿಕೆ ನೀಡಿರುವ ರವಿಕುಮಾರ್‌ಗೆ ರಾಜ್ಯ ಉಚ್ಚ ನ್ಯಾಯಾಲಯ ಕ್ಷಮೆಯಾಚಿಸುವಂತೆ ತಾಕೀತು ಮಾಡಿದೆ. ಆತನನ್ನು ವಿಧಾನ ಪರಿಷತ್‌ ಸದಸ್ಯ ಸ್ಥಾನದಿಂದ ವಜಾಗೊಳಿಸಿ” ಎಂದು ಆಗ್ರಹಿಸಿದರು.

ಹೆಚ್ ಆಂಜನೇಯ, ಮಲ್ಲಯ್ಯ ಕೊಳಗಲ್, ಬಿ ರಮೇಶ್, ಹೆಚ್ ಶಂಕರ್, ಮಹೇಶ್ ಬತ್ರಿ, ಎರಿಸ್ವಾಮಿ ಹಲುಕುಂದಿ, ಬಳ್ಳಾರಿ, ಹೆಚ್ ದೊಡ್ಡಬಸಪ್ಪ, ಸಿರುಗುಪ್ಪ, ಜಗದೀಶ್ ಕುಮಾರ್, ಕಂಪ್ಲಿ, ಮಾರೆಪ್ಪ ಕುರುಗೋಡು, ಎಸ್ ಕೆಂಚಪ್ಪ, ಜಿ ಪಂಪಾಪತಿ, ಮಹೇಶ್ ಇಂದಿರಾ ನಗರ, ಟಿ.ಎಂ ಎರಿಸ್ವಾಮಿ, ಹುಲುಗಪ್ಪ ಬೆಳಗಲ್ಲು, ಗಂಗಾಧರ ವೇಣಿವೀರಾಪುರ, ಎಂ ಎಸ್ ಭೀಮಶಂಕರ್, ಸೂರಿ, ಪರಶುರಾಮ, ಸಿದ್ದಾರ್ಥಕಾಲೋನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...