ಬಳ್ಳಾರಿ | ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ; ಯುವಕನ ಬಂಧನ

Date:

Advertisements

ಶಾಸಕ ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶವೊಂದು ಬಂದಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.

ಬಾಂಬ್ ಇರಿಸಿದ ಬೆದರಿಕೆ ಹಾಕಿರುವ ಬಂಧಿತ ಯುವಕ 10ನೇ ವಾರ್ಡ್, ಅಂದ್ರಾಳ್ ಗ್ರಾಮದ ಸಂತೋಷ್ ಎಂದು ಹೇಳಲಾಗಿದೆ.

ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಸೋಮವಾರ ತಡರಾತ್ರಿ ಬೆಂಗಳೂರಿನಲ್ಲಿದ್ದ ಶಾಸಕರ ವಾಟ್ಸಪ್ ನಂಬರ್‌ಗೆ ಸಂದೇಶ ಬಂದಿದೆ. ಇದನ್ನು ಗಮನಿಸಿದ ಶಾಸಕ ಕೂಡಲೇ ಗಾಂಧಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತ ಪೊಲೀಸರು ಬಳ್ಳಾರಿಯಲ್ಲಿರುವ ಶಾಸಕ ಭರತ್ ರೆಡ್ಡಿ ಅವರ ಕಚೇರಿಯನ್ನು ಪರಿಶೀಲನೆ ನಡೆಸಿ ಬಳಿಕ ಬೆದರಿಕೆ ಸಂದೇಶ ಬಂದಿರುವ ವಾಟ್ಸಪ್ ನಂಬರ್ ಟ್ರೇಸ್ ಮಾಡಿ ಬಳ್ಳಾರಿಯ ರೂಪನಗುಡಿ ರಸ್ತೆಯ ಸಂತೋಷ್ ಎಂಬ ಯುವಕನ್ನು ಬಂಧಿಸಿದ್ದಾರೆ.

Advertisements
WhatsApp Image 2025 03 18 at 7.29.25 PM

ಉನ್ನತ ವ್ಯಾಸಂಗ ಮಾಡಿದರೂ ಕೆಲಸವಿಲ್ಲದೇ ಮನೆಯಲ್ಲೇ ಇದ್ದ ಸಂತೋಷ್ ಸೋಮವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ಬಳ್ಳಾರಿ ಶಾಸಕ ಭರತ್ ರೆಡ್ಡಿ ಅವರ ವಾಟ್ಸಪ್ ನಂಬರ್‌ಗೆ ಈ ಸಂದೇಶವನ್ನು ಕಳುಹಿಸಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಅಲ್ಲದೆ ಯುವಕನನ್ನು ಪರಿಶೀಲಿಸಿದ ಪೊಲೀಸರಿಗೆ ಯುವಕ ಕುಡಿದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇದನ್ನೂ ಓದಿ: ಬಳ್ಳಾರಿ | ಮಾನವ ಕಲ್ಯಾಣ ಕಾರ್ಯವು ವಿಶ್ವಮಾನ್ಯವಾದುದು: ಪ್ರೊ. ಎಂ ಮುನಿರಾಜು

ಸಂತೋಷ್ ಕುಡಿದ ಅಮಲಿನಲ್ಲಿ ಬೆದರಿಕೆ ಸಂದೇಶ ಕಳುಹಿಸಿರುವುದು ಮೇಲ್ನೋಟಕ್ಕೆ ಕಂಡು ಬಂದರೂ ಯಾಕಾಗಿ ಈ ರೀತಿ ಸಂದೇಶ ಕಳುಹಿಸಿದ್ದಾನೆ ಎಂಬುದರ ಕುರಿತು ಹೆಚ್ಚಿನ ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X