ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶನಿವಾರ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದ್ದಾರೆ.
ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಚಿಕ್ಕಮಕ್ಕಳೂ ಕೂಡ ಭಾಗವಹಿಸಿರುವುದು ವಿಶೇಷವಾಗಿ ಕಂಡುಬಂದಿತು.
ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ದಾನ-ಧರ್ಮದ ಮಹತ್ವ ಕುರಿತು ಭೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳಲು ಕರೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 300ಕ್ಕೂ ಹೆಚ್ಚು ಪೊಲೀಸರ ಬಂದೋಬಸ್ತ್
ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಪ್ರಾರ್ಥನಾ ಸ್ಧಳದಲ್ಲಿ ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ್ ರೆಡ್ಡಿ, ನಾಗೇಂದ್ರ, ಕಾಂಗ್ರೆಸ್ ಮುಖಂಡ ಭರತ್ ರೆಡ್ಡಿ ಭಾಗವಹಿಸಿ,ಮುಸ್ಲಿಂ ಭಾಂದವರಿಗೆ ಶುಭಾಶಯ ಕೋರಿದರು.