ಬಳ್ಳಾರಿ | ಮೇವು, ನೀರು ಅರಸಿ ಕೊಪ್ಪಳದಿಂದ ದನಕರುಗಳ ವಲಸೆ

Date:

Advertisements

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ.

ಸಿರುಗುಪ್ಪ ತಾಲೂಕಿನ ಎಲ್‌ಎಲ್‌ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ ರೈತರು ಭತ್ತ, ಸಜ್ಜೆ, ಜೋಳ ಬೆಳೆದಿದ್ದು, ಕಟಾವು ನಡೆಯುತ್ತಿದ್ದು, ಕಟಾವಿನ ನಂತರ ಸಿಗುವ ಸಿಗುವ ಮೇವು ಮತ್ತು ರೈತರು ನೀಡುವ ಹಣಕ್ಕಾಗಿ ಈ ಹಸುಗಳ ಮಾಲೀಕರು ಕುಟುಂಬ ಸಮೇತ ದರೂರು, ಕರೂರು, ಚಾನಾಳ, ಬಗ್ಗೂರು, ಎಚ್.ಹೊಸಳ್ಳಿ, ತಾಳೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಮ್ಮ ಹಸುಗಳೊಂದಿಗೆ ಬೀಡು ಬಿಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಮತ್ತು ಬೂದುಗುಪ್ಪ, ಮಲ್ಲಾಪುರ, ಬಂಕಾಪುರ, ಹಳೆಕುಮ್ಮಟ, ಎಚ್‌ಆರ್‌ಜಿ ಕ್ಯಾಂಪ್ ಗ್ರಾಮಗಳಿಂದ ಹಸುಗಳಿಗೆ ತಿನ್ನಲು ಹುಲ್ಲು, ನೀರು ಸಿಗದೆ ಸಾಮೂಹಿಕವಾಗಿ 200ರಿಂದ 400 ಹಸುಗಳ ಸುಮಾರು 80ಕ್ಕೂ ಹೆಚ್ಚು ಜನರ ಗುಂಪು ಕಾಲ್ನಡಿಗೆಯಲ್ಲಿ ಬಳ್ಳಾರಿ ಜಿಲ್ಲೆಗೆ ಬಂದಿದ್ದಾರೆ.

Advertisements

ಈ ಬಾರಿಯ ಬರಗಾಲದಿಂದ ಹಸುಗಳ ಮಾಲೀಕರು ಹೀಗೆ ವಲಸೆ ಬಂದಿದ್ದು, ಭತ್ತ ಕೊಯ್ಲು ಆಗಿರುವ ಗದ್ದೆಗಳಲ್ಲಿ ಹಸುಗಳಿಗೆ ಹಸಿಮೇವು ಸಿಗುತ್ತದೆ ರೈತರ ಹೊಲಗಳಲ್ಲಿ ಒಂದು ರಾತ್ರಿ ಹಸುಗಳನ್ನು ಬಿಡಲು ರೈತರಿಂದ 5 ಸಾವಿರ ರೂ. ತೆಗೆದುಕೊಳ್ಳುತ್ತಿದ್ದು, ಜೀವನೋಪಾಯಕ್ಕೆ ಒಂದಷ್ಟು ಹಣ ದೊರೆಯುತ್ತಿದೆ ಎನ್ನುತ್ತಿದ್ದಾರೆ ವಲಸೆ ಬಂದ ಗೋಪಾಲಕರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X