ಬಳ್ಳಾರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ: ಎಸ್‌ಕೆಎಂನಿಂದ ಪ್ರತಿಭಟನೆ

Date:

Advertisements

ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ  ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿ ದಹನ ಮಾಡಲಾಯಿತು.

ಈ ಸಂದರ್ಭದಲ್ಲಿ ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್, ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ , ಕರ್ನಾಟಕ ಜನಶಕ್ತಿಯ  ವಸಂತ್ ಕಾಳೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ 1942 ರ ಸಮಯದಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಐತಿಹಾಸಿಕ ಹೋರಾಟ ನಡೆದ ದಿನ ಇಂದು. ಈ ಹಿನ್ನೆಲೆಯಲ್ಲಿ ದೇಶದ  ದುಡಿಯುವ ಜನರಿಗೆ ಸೇರಬೇಕಾದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂಬ ದೇಶವ್ಯಾಪಿ ಬೃಹತ್ ಹೋರಾಟ ನಡೆಯುತ್ತಿದೆ. ಇಂದು ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಈ ಬಂಡವಾಳಶಾಹಿಗಳ ಪರವಾಗಿ ನೀತಿಗಳನ್ನು ಜಾರಿಗೆ ತಂದು, ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕೃಷಿಯ – ಕಾರ್ಪೋರೇಟಿಕರಣ ನಿಲ್ಲಿಸಬೇಕು ರೈತ ವಿರೋಧಿ – ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು, ಭಾರತದ ಕೃಷಿ ಉತ್ಪಾದನೆ- ಮಾರುಕಟ್ಟೆ-ಸಂಗ್ರಹಣೆ ಮತ್ತು ವಿತರಣೆ ರೈತರು ಮತ್ತು ಸರಕಾರದ ಅಧೀನದಲ್ಲಿಯೇ ಇರುವಂತೆ ಜೋಪಾನ ಮಾಡಬೇಕು, ಕೃಷಿಭೂಮಿ ರೈತರಲ್ಲೇ ಉಳಿಯುವಂತೆ ಸಂರಕ್ಷಿಸಬೇಕು, ಕೈಗಾರಿಕೆ- ರಾಷ್ಟ್ರೀಯ ಹೆದ್ದಾರಿ- ರಾಜ್ಯ ಹೆದ್ದಾರಿ ಹೆಸರಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವುದನ್ನು ನಿಲ್ಲಿಸಿ, ಕೃಷಿ ಉತ್ಪಾದನೆಯನ್ನು ವಿಶ್ವ ವಾಣಿಜ್ಯ ಒಪ್ಪಂದದಿಂದ ಹೊರಗಿಡಿ, ಕೃಷಿ ಉತ್ಪನ್ನಗಳಿಗೆ ಡಾ. ಸ್ವಾಮಿನಾಥನ್ ನೇತೃತ್ವದ ಸಮಿತಿಯ ಶಿಪಾರಸ್ಸಿನಂತೆ ಉತ್ಪಾದನಾ ವೆಚ್ಚ 50% ಬೆಂಬಲ ಬೆಲೆಯನ್ನು ಕಾನೂನಾತ್ಮಕ ಗೊಳಿಸಿ, ಕೃಷಿ ಒಳಸುರಿಗಳ ಮೇಲಿನ ಜಿಎಸ್ಟಿ ಹಿಂಪಡೆಯಿರಿ, ಕೃಷಿಗೆ ಅಂತರಿಕ ಸಹಾಯಧನವನ್ನು ಹೆಚ್ಚು ನೀಡಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೃಷಿ ಉತ್ಪನ್ನಗಳ ಸಂರಕ್ಷಣೆಗೆ ಕೋಲ್ಡ್ ಸ್ಟೋರೇಜ್ ಗಳನ್ನು ಸಹಕಾರಿ ಸಂಘಗಳ ಮೂಲಕ ನಿರ್ಮಿಸಲು ಸಹಾಯಧನ ನೀಡಬೇಕು, ಅಂತಾರಾಜ್ಯ ನೀರಾವರಿ ಸಮಸ್ಯೆಗಳನ್ನು ಕಾಲಮಿತಿಯೊಳಗಡೆ ಬಗೆಹರಿಸಬೇಕು, ಅರಣ್ಯ ಸಂಪತ್ತನ್ನು ರಕ್ಷಿಸಲು ಪಶ್ಚಿಮಘಟ್ಟದ ರಕ್ಷಣೆಗಾಗಿ ಮಾಧವ ಗಾಡ್ಗೀಳ್ ವರದಿಯನ್ನು ಅನುಷ್ಠಾನ ಗೊಳಿಸಬೇಕು, ಬರ ಹಾಗೂ ಅತಿವೃಷ್ಟಿಯಿಂದ ಕೃಷಿ ಕ್ಷೇತ್ರಕ್ಕಾದ ನಾಶ ನಷ್ಟಕ್ಜೆ ವೈಜ್ಞಾನಿಕ ಪರಿಹಾರ ನೀಡಬೇಕು, ಕೇರಳದ ವಯನಾಡು ಸೇರಿದಂತೆ ಈ ಬಾರಿಯ ಮೇಘಸ್ಪೋಟವನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಪುನರ್ವಸತಿ ಕಲ್ಪಿಸಬೇಕು,  ಸರಕಾರಗಳ ಕೃಷಿ ವಿರೋಧಿ ನೀತಿಯಿಂದಾಗಿ ಸಾಲಗಾರರಾದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಫಸಲ್ ಭೀಮಾ ಯೋಜನೆಯಿಂದಾಗಿ ರೈತರಿಗಾದ ಮೋಸ ಹಾಗೂ ಖಾಸಗಿ  ವಿಮಾ ಕಂಪನಿಗಳ ಹಗಲು ದರೋಡೆ ನಿಲ್ಲಿಸಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಸರ್ಕಾರ  ಈಡೇರಿಸಬೇಕು, ಇಲ್ಲದಿದ್ದರೆ ಬೃಹತ್ ಹೋರಾಟಗಳಿಗೆ ರೈತ ಕೃಷಿ ಕಾರ್ಮಿಕರು ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ  ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ,  ರಾಜ್ಯ ರೈತ ಸಂಘದ  ದ್ಯಾವಣ್ಣ ಜನಶಕ್ತಿಯ ಜಿಲ್ಲಾ ಸದಸ್ಯ ಅಪ್ಪಾಜಿ, ಹೊನ್ನೂರಪ, ಸೇರಿದಂತೆ ಇತರರು ಇದ್ದರು

Advertisements
1000014001
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X