ಬಳ್ಳಾರಿ | ತುಂಗಭದ್ರಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

Date:

Advertisements

ತುಂಗಭದ್ರಾ ಬಲದಂಡೆ ಕಾಲುವೆಗೆ ಕನಿಷ್ಠ 20 ದಿವಸದವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಎಐಕೆಕೆಎಂಸ್ ರೈತ ಸಂಘಟನೆ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬಳ್ಳಾರಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ ಮಾತನಾಡಿ, “ಬಳ್ಳಾರಿ ಭಾಗದ ರೈತರು ಜೋಳ, ಮೆಕ್ಕೆಜೋಳ, ಸಜ್ಜೆ, ಹಲಸಂದೆ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆ ಬೆಳೆಯುತ್ತಿದ್ದಾರೆ. ಇವರಿಗೆ ಈ ಬೆಳೆಗಳು ಕೈಸೇರಲು ಇನ್ನೂ ಸುಮಾರು 20 ದಿನಗಳವರೆಗೆ ನೀರಿನ ಅವಶ್ಯಕತೆಯಿದೆ. ಹಾಗಾಗಿ ರೈತರ ಹಿತದೃಷ್ಟಿಯಿಂದ ಈ ತಿಂಗಳ ಪೂರ್ತಿ ಎಚ್‌ಎಲ್‌ಸಿ ಕಾಲುವೆಗೆ ನೀರು ಹರಿಸಬೇಕು” ಎಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಒತ್ತಾಯಿಸಿದರು.

ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಗೋವಿಂದ್ ಮಾತನಾಡಿ, “ಜನವರಿ 20ರವರೆಗೂ ರೈತರ ಜಮೀನುಗಳಿಗಳಿಗೆ ನೀರು ಬೇಕಾಗಿದೆ. ಒಂದು ವೇಳೆ ನೀರಿನ ಕೊರತೆಯಾದರೆ, ಬೆಳೆದ ಬೆಳೆ ಕೈಗೆ ಸಿಗದೆ ಹಾಳಾಗುತ್ತದೆ. ‘ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆʼ. ಈಗಾಗಲೇ ಮೆಣಸಿನಕಾಯಿ ಬೆಳೆಯಲ್ಲಿ ಸಾಕಷ್ಟು ನಷ್ಟದಿಂದ ಸೋತಿದ್ದಾರೆ. ಈಗ ಬರುವ ಬೆಳೆಯಲ್ಲಿಯೂ ನಷ್ಟವಾದರೆ ರೈತರು ಗುಳೆವು ಹೋಗುವ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಬೆಳೆ ಕಟಾವಿಗೆ ಬರುವವರೆಗೂ ನೀರು ಹರಿಸಬೇಕು” ಎಂದು ವಿನಂತಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ರನ್ನ ವೈಭವಕ್ಕೆ ಒಂದು ಕೋಟಿ ಅನುದಾನ: ಸಚಿವ ತಿಮ್ಮಾಪೂರ

ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ರೈತರಾದ ಈಶ್ವರ್ ಗೌಡ, ಬಸವರಾಜ್, ಗಾದಿಲಿಂಗ, ಓಂಕಾರ, ಸ್ವಾಮಿ, ಬಸವರಾಜ್, ತುಳಸಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X