ಬಳ್ಳಾರಿ | ʼಜಾಗತಿಕವಾಗಿ ವಿಶ್ವ ಮಾನವ ಸಂದೇಶ ಸಾರಿದ್ದು ಕನ್ನಡ ಸಾಹಿತ್ಯʼ

Date:

Advertisements

ಜಾಗತಿಕ ಸಂಸ್ಕೃತಿಗೆ ವಿಶ್ವ ಮಾನವ ಸಂದೇಶವನ್ನು ಕನ್ನಡ ಸಾಹಿತ್ಯ ನೀಡಿದೆ ಎಂದು ತೋರಣಗಲ್ಲು ವಿಭಾಗದ ಉಪ ಪೊಲೀಸ್ ಅಧೀಕ್ಷಕ ಪ್ರಸಾದ್ ಕೆ ಗೋಖಲೆ ಅವರು ತಿಳಿಸಿದರು.

ನಗರದ ವೀರಶೈವ ಮಹಾವಿದ್ಯಾಲಯದ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ನಡೆದ ಲಿಂ. ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ದತ್ತಿ , ಲಿಂ ಕೋಳೂರು ಪೊಂಪನಗೌಡ ಮತ್ತು ಕೋಳೂರು ನೀಲಮ್ಮ ದತ್ತಿ, ಲಿಂ. ಜಾನೇಕುಂಟೆ ಸಿದ್ಧಬಸಪ್ಪ ಸ್ಮಾರಕ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಜಾಗತೀಕರಣದ ಸಂದರ್ಭದಲ್ಲಿ ದೇಶೀಯ ಭಾಷೆಗಳ ಬೆಳವಣಿಗೆಗೆ ಆತಂಕ ಉಂಟಾಗುತ್ತಿದೆ. ಹೀಗಾಗಿ ಪ್ರಾದೇಶಿಕ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ವ್ಯಕ್ತಿತ್ವವನ್ನು ಸಾಬೀತು ಪಡಿಸಲು ನಿರಂತರವಾಗಿ ಅಧ್ಯಯನಶೀಲರಾಗಬೇಕು” ಎಂದು ಕರೆ ನೀಡಿದರು.

Advertisements

ಕುರುಗೋಡು ಪದವಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶಶಿಕಾಂತ, “ಕನ್ನಡ ಸಾಹಿತ್ಯದಲ್ಲಿ ನೈತಿಕ ಶಿಕ್ಷಣದ ಮೌಲ್ಯಗಳು” ಎನ್ನುವ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ: ಬಳ್ಳಾರಿ | ಚೀಲದಲ್ಲೇ ಮೊಳಕೆಯೊಡೆದ ಜೋಳ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಕಾರ್ಯಕ್ರಮದಲ್ಲಿ ವೀರಶೈವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ, ಕರ್ನಾಟಕ ಯುವಕ ಸಂಘದ ಅಧ್ಯಕ್ಷ ಜಿ ಬಸವರಾಜ, ವೀರಶೈವ ಕಾಲೇಜಿನ ಪ್ರಾಂಶುಪಾಲ ಜಿ ಮಲ್ಲನಗೌಡ, ಡಾ ನೀಲಮ್ಮ, ಡಾ. ಶಾಮೂರ್ತಿ, ಕಸಾಪ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ, ಕಸಾಪ ಗ್ರಾಮೀಣ ಅಧ್ಯಕ್ಷ ಎ ಯರ್ರಿಸ್ವಾಮಿ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X