ಬಳ್ಳಾರಿ | ಆಶ್ರಯ ಫಲಾನುಭವಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗಳಿಗೆ ಅವಕಾಶ

Date:

Advertisements

ಬಳ್ಳಾರಿಯ ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆ ಬಳಿ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಂಡೂರು ಪುರಸಭೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಫಲಾನುಭವಿಗಳ ಹೆಸರು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳಲ್ಲಿ ಬದಲಾವಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಂಡೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಆಕ್ಷೇಪಣೆಗಳನ್ನು ಅರ್ಜಿ ಸಹಿತ ಪೂರಕ ದಾಖಲೆಗಳೊಂದಿಗೆ ಪುರಸಭೆಗೆ ಸಲ್ಲಿಸಬಹುದು. ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಪ್ರಸ್ತುತ ನಿವೇಶನ ಹೊಂದಿದ, ವಸತಿ ಸೌಲಭ್ಯ ಪಡೆದ ಫಲಾನುಭವಿಗಳು ಕಂಡುಬಂದಲ್ಲಿ ಅರ್ಜಿಯೊಂದಿಗೆ ಸೂಕ್ತ ದಾಖಲೆ ಲಗತ್ತಿಸಿ ಏಪ್ರಿಲ್‌ 1 ರೊಳಗಾಗಿ ಸಲ್ಲಿಸಬೇಕು.

Advertisements

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಹೆಚ್ಚಿನ ಮಾಹಿತಿಗಾಗಿ ಸಂಡೂರು ಪುರಸಭೆ ಕಚೇರಿಗೆ ಸಂಪರ್ಕಿಸಬಹು ಎಂದು ಪುರಸಭೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X