ಬಳ್ಳಾರಿ | ಏ.1 ರಿಂದ ಮನರೇಗಾ ಕೂಲಿ ₹370ಕ್ಕೆ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್

Date:

Advertisements

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು ಏ.1 ರಿಂದ ₹370ಕ್ಕೆ ಹೆಚ್ಚಳ ಮಾಡಲಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದರು.

ಮನರೇಗಾ ಯೋಜನೆಯಡಿ ಪ್ರಸ್ತುತ ವರ್ಷದಲ್ಲಿ ₹349 ಕೂಲಿ ನೀಡುತ್ತಿದ್ದು, ಅದನ್ನು ಪರಿಷ್ಕರಿಸಿ 2025-26ನೇ ಸಾಲಿನ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಜನರು ವಲಸೆ ಹೋಗುವುದನ್ನು ತಪ್ಪಿಸಿ ಗ್ರಾಮದ ಬಡ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ, ತಮ್ಮ ಗ್ರಾಮದಲ್ಲೇ 100 ದಿನಗಳವರೆಗೆ ಕೆಲಸದಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಿದರು.

ಈ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ. ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯತಿ ನೀಡಲಾಗುತ್ತದೆ.

Advertisements

ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್‌ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್‌ಪೋರ್ಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X