ಬಳ್ಳಾರಿ | ಬಯಲಾಟ ಪ್ರದರ್ಶನ ಮಾಡಿದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿದೆ: ರಂಗ ನಿರ್ದೇಶಕರಿಂದ ದೂರು

Date:

Advertisements

ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಕಾರ್ಯದರ್ಶಿ ಹಾಗೂ ಹಾರ್ಮೋನಿಯಂ ಮೇಷ್ಟ್ರು ಮುದ್ದಟ ನೂರು ತಿಪ್ಪೇಸ್ವಾಮಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮದಲ್ಲಿ ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಮೋಕಾ ಗ್ರಾಮದಲ್ಲಿ ಬಯಲಾಟ ಪ್ರದರ್ಶನ ಮಾಡಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿ ಇಲಾಖೆಯಿಂದ  ಹಣ ಪಡೆದಿದ್ದಾರೆ ಎಂದು ಹಿರಿಯ ಕಲಾವಿದ ಹಾಗೂ ರಂಗ ನಿರ್ದೇಶಕರಾದ ಜಗದೀಶ್ ಅವರು ದೂರು ನೀಡಿದ್ದಾರೆ.

ಈ ಸಂಬಂಧ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್  ಅವರಿಗೆ ಜಗದೀಶ್ ಅವರು ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

IMG 20240810 WA0000

ಈ ಬಗ್ಗೆ ಜಗದೀಶ್ ಅವರು ಮಾತನಾಡಿದ್ದು, “ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ಇತ್ತೀಚೆಗೆ ಶಂಕರ ಬಂಡೆ ಯಲ್ಲನ ಗೌಡರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾಗಿದೆ. ಅದರ ಕಾರ್ಯದರ್ಶಿಯಾಗಿರುವ ಮುದ್ದಟ ನೂರು ತಿಪ್ಪೇಸ್ವಾಮಿ ಅವರು ಮೋಕಾ ಗ್ರಾಮದಲ್ಲಿ ಬಯಲಾಟ ಪ್ರದರ್ಶನ ಮಾಡಿರುವುದಾಗಿ ಹೇಳಿ ಬೇರೆ ಊರಿನ ಹಳೆಯ ಫೋಟೋ ನೀಡಿ ಹಣ ಪಡೆದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದಾರೆ” ಎಂದು ದೂರಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕೋಲಾರ | ಕೋಚಿಮುಲ್ ಕಾಂಗ್ರೆಸ್ ಸರ್ಕಾರದ ಕೃಪಾಪೋಷಿತ ನಾಟಕ ಮಂಡಳಿ : ಕೆ ವಿ ನಾಗರಾಜು ಆರೋಪ

“ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಿರುವ ದಾಖಲೆಗಳನ್ನು ಗಮನಿಸಿದಾಗ ಯಾವುದೋ ಕಲಾ ಟ್ರಸ್ಟ್ ಪ್ರಾಯೋಜಿತ ಕಾರ್ಯಕ್ರಮ ಏರ್ಪಡಿಸಿದ ವಿವರ ಬ್ಯಾನರಿನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಆ ಫೋಟೋದಲ್ಲಿರುವ ದಿನಾಂಕವೇ ಬೇರೆಯಾಗಿದ್ದು, 27.10.2021 ದಿನಾಂಕದ ಬಯಲಾಟಕ್ಕೆ 05.12.2021 ದಿನಾಂಕದ ಫೋಟೋ ಸಲ್ಲಿಸಿ ಇಲಾಖೆಗೆ ವಂಚಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು” ಎಂದು ರಂಗ ನಿರ್ದೇಶಕ ಕೆ. ಜಗದೀಶ್, ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X